ಲಾರಿ ಹರಿದು ಮೂರು ವರ್ಷದ ಬಾಲಕ ಸಾವು
ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮುಹಮ್ಮದ್ ಆಹಿಲ್ ಖಾನ್ (೩) ಮೃತ ಬಾಲಕ.
ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ ಬಾನು ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಬಾಲಕ ತಂದೆ ಉದ್ಯೋಗ ನಿಮಿತ್ತ ದುಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುದ್ದಿಗಾರರೊಂದಿಗೆ ಗ್ರಾಮ ಸಲಹಾ ಸಮಿತಿ ಅಧ್ಯಕ್ಷ ಬಿ. ಈಶ್ವರಪ್ಪ ಮಾತನಾಡಿ, ಗ್ರಾಮದಲ್ಲಿ ರಸ್ತೆ ಅಗಲೀಕರಣವಾಗುತ್ತಿದೆ. ಅಂಗನವಾಡಿ ಕೇಂದ್ರವು ರಸ್ತೆಯ ಪಕ್ಕದಲ್ಲಿರುವುದೇ ಘಟನೆಗೆ ಕಾರಣ. ಅದನ್ನು ಸ್ಥಳಾಂತರ ಮಾಡಬೇಕು. ನೂತನ ಅಂಗನವಾಡಿ ಕಟ್ಟಡವನ್ನು ಗ್ರಾಮದ ಒಳ ಭಾಗದಲ್ಲಿ ನಿರ್ಮಿಸಲು ನಿವೇಶನ ನೀಡಲಾಗುವುದು. ಜೊತೆಗೆ, ಟಿಪ್ಪರ್, ಕ್ಯಾಂಟರ್ ಸೇರಿದಂತೆ ಇತರೆ ಲಾರಿಗಳು ಗ್ರಾಮಗಳ ಪರಿಮಿತಿಯಲ್ಲಿ ವೇಗಮಿತಿಯಿಲ್ಲದೇ ವಾಹನ ಚಲಾಯಿಸುತ್ತಾರೆ. ಅವರ ಮೇಲೆ ಸಂಬಂಧ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…