ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ.
ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು. ಅಲ್ಲಿ ಕಾಡುಕೋಣ ಮೃತಪಟ್ಟಿದೆ.
ಅರಣ್ಯ ಇಲಾಖೆಯವರು ಎಫ್ಐಆರ್ ದಾಖಲಿಸಿ ಅಪಘಾತ ಮಾಡಿದ ವಾಹನಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಮೃತ ಕಾಡುಕೋಣವನ್ನು ನ್ಯಾಯಾಲಯದ ಅನುಮತಿ ಮೇರೆಗೆ ಅಂತ್ಯಕ್ರೀಯೆ ನಡೆಸಲಾಯಿತು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್