Headlines

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…

Read More

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಆವರಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ನುಗ್ಗಿ ಶಾಲಾ ಕಟ್ಟಡದ ಒಳಗೆ ಕುಡಿಯುವ ‘ಎಣ್ಣೆ ಪಾರ್ಟಿ’ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಶಾಲೆ ಆವರಣದಲ್ಲಿ ಅನಾಮಿಕ…

Read More

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…

Read More

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು ತೀರ್ಥಹಳ್ಳಿ, ಜುಲೈ 30: ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮದಲ್ಲಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜುಲೈ 25 ರಂದು ಸಂಜೆ ಟವರ್‌ನ್ನು ಪರಿಶೀಲಿಸಲು ಬಂದ ಸಂದೀಪ್ ಮಳ್ಳಿಗಾರ ಅವರಿಗೆ ಬ್ಯಾಟರಿಗಳು ಕಳವಾಗಿರುವುದು ಗೊತ್ತಾಯಿತು. ಈ ಬಗ್ಗೆ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು ₹2.8 ಲಕ್ಷ ಮೌಲ್ಯದ 2 ವೋಲ್ಟ್ ಸಾಮರ್ಥ್ಯದ 24 ಬ್ಯಾಟರಿಗಳು ಕಳವು ಆಗಿವೆ….

Read More

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…

Read More

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ ರಿಪ್ಪನ್‌ಪೇಟೆ: “ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯವು ರಾಜಕೀಯದ ಆಟಕ್ಕೆ ಬಲಿಯಾಗಬಾರದು. ಇದು ಸಾವಿರಾರು ಭಕ್ತರ ನಂಬಿಕೆಗೆ ತಾಯಿಯಾಗಿರುವ ದೇಗುಲ. ಇಂತಹ ಪವಿತ್ರ ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ,” ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಆರೋಪಿಸಿದ್ದಾರೆ. ಬುಧವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕರಾಗಿ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ – ಭಕ್ತರ ದಂಡೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕಾಗಿ ಉತ್ಸಾಹದಿಂದ ಆಗಮಿಸಿದ್ದರು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು-ಸಕ್ಕರೆಯಿಂದ ಆರಾಧನೆ, ನಾಗಬಲಿ, ಅಷ್ಟನಾಗಾರ್ಚನೆ,…

Read More

ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ

ಬಸ್ ಮತ್ತು ಲಾರಿ ಅಪಘಾತ – ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಮುಂಬಾಳು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರೊಬ್ಬರು ದೂರು ದಾಖಲಿಸಿದ್ದಾರೆ. ಈ ಅಪಘಾತದಲ್ಲಿ ತಮ್ಮ 12 ಹಲ್ಲುಗಳು ಮುರಿದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ…

Read More

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ – ಸಾವಿನ ಸುತ್ತ ಅನುಮಾನಗಳ ಹುತ್ತ..!??

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಚಂಗಾರು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಕೃಷಿ ಕಾರ್ಯಕ್ಕಾಗಿ ಜುಲೈ 26 ರಂದು ಮಧ್ಯಾಹ್ನ 2 ಗಂಟೆಗೆ ಮನೆಪಕ್ಕದ ತೋಟಕ್ಕೆ ತೆರಳಿದ್ದ ರಮೇಶ್ ಎಂಬವರು ಆ ದಿನದಿಂದ ನಾಪತ್ತೆಯಾಗಿದ್ದರು. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು. ಇಂದು ಬೆಳಿಗ್ಗೆ (ಜು. 29) ರಮೇಶ್ ಅವರ ಶವ…

Read More

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್​ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್​ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ…

Read More