ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ 

ಶಿವಮೊಗ್ಗ:  ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ.

ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಆರೋಗ್ಯ ಸುಧಾರಿಸದ ಹಿನ್ನಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್‌ಗೆ ರವಾನಿಸಲಾಗಿತ್ತು.

ಮೆಗ್ಗಾನ್‌ನಲ್ಲಿ ಮಕ್ಕಳ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ಮಕ್ಕಳೆಲ್ಲರೂ ಆರಾಮವಾಗಿದ್ದಾರೆ. ಇಂದು ಅವರಲ್ಲಿ ಚೇತರಿಕೆ ಕಂಡುಬಂದಿದೆ. ಮೂವರು ಮಕ್ಕಳಲ್ಲಿ ಇನ್ನೂ ಸ್ವಲ್ಪ ಅಂಶ ಅನಾರೋಗ್ಯವಿದೆ.ಅನಾರೋಗ್ಯಕ್ಕೆ ತುತ್ತ್ತಾದ ಮಕ್ಕಳೆಂದರೆ,  ರಶ್ಮಿತಾ, ಮನ್ವಿತ್, ಹಿತಿಕ್ಷಾ, ರವಿಕಲಾ, ಧನುಷ್, ಹಿತಾ, ಶ್ರೇಯಸ್, ಶಶಾಂಕ್, ತನ್ವಿತಾ, ಧ್ರುವಿಕಾ,  ಸಿಂಚನಾ ಮತ್ತು ಆರ್ಯಾ. 
ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆಯೇ ರಾತ್ರ್ರಿಯೇ ರಾಜಕೀಯ ಮುಖಂಡರು, ಅಧಿಕಾರಿಗಳು ಆಸ್ಪತ್ರ್ರೆಗೆ ಧಾವಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು ಮತ್ತು ಸೂಕ್ತ ಚಿಕಿತ್ಸೆಗೆ ಆದೇಶಿಸಿದರು. ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸಿಇಓ , ಡಿಎಚ್‌ಓ ಡಾ|| ನಟರಾಜ್,  ಜಿಲ್ಲಾ ಸಚಿವರ ಆಪ್ತ ಕಾರ್ಯದರ್ಶಿ,  ಮೆಗ್ಗಾನ್ ಆಸ್ಪತ್ರೆ ಸಮಿತಿಯವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಮತ್ತು ಮುಖಂಡರು ಆಗಮಿಸಿ ಆರೋಗ್ಯ ವಿಚಾರಿಸಿದರು.

ಇಂದು ಶುಕ್ರವಾರ ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಹೊಸನಗರ ತಾಲೂಕು ಅಂಗನವಾಡಿ ಮೇಲ್ವಿಚಾರಕಿ ಗಾಯತ್ರಿ, ಮಕ್ಕಳು ಈಗ ಸುಧಾರಿಸಿಕೊಂಡಿದ್ದಾರೆ. ಇನ್ನು ಒಂದು ದಿನ ಅವರಿಗೆ ಚಿಕಿತ್ಸೆಯ ಅವಶ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಾರೂ ಹೆದರುವ ಅವಶ್ಯಕತೆ ಇಲ್ಲ. ವಿಟಮಿನ್ ಎ ಡ್ರಾಪ್‌ನಿಂದ ತೊಂದರೆಯಾಗಿದೆ. ಮಕ್ಕಳೆಲ್ಲರೂ ಆರೋಗ್ಯವಾಗಿದ್ದರೆ ಎಂದರು.

ಘಟನೆ ಬಗ್ಗೆ ಮಾಹಿತಿ ನೀಡಿದ ಅಂಗನವಾಡಿಯ ಶಿಕ್ಷಕಿ ಕಮಲಾಶ್ರೀ,  ಎಲ್ಲಾ ಅಂಗನವಾಡಿ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಲಾಗುತ್ತಿದೆ. ಆದರೆ ನಮ್ಮ ಅಂಗನವಾಡಿಯಲ್ಲಿ ಮಾತ್ರ ಸ್ವಲ್ಪ ವ್ಯತ್ಯಾಸವಾಗಿದ. ಇದು ಪಾಲಕರಲ್ಲಿ  ಮತ್ತು ಸ್ಥಳೀಯರಲ್ಲಿ ಗಾಬರಿ ಹುಟ್ಟಿಸಿತ್ತು. ಮೆಗ್ಗಾನ್‌ಗೆ ಕರೆತಂದ ಮೇಲೆ ಮಕ್ಕಳು ಗುಣಮುಖರಾಗಿದ್ದ್ದಾರೆ. ಎಂದಿನಂತೆ ಚಟುವಟಿಕೆಯಲ್ಲಿದ್ದಾರೆ ಎಂದರು. 

ಮಕ್ಕಳೆಲ್ಲರಿಗೂ ಆರೋಗ್ಯ ಮಿತ್ರ ಮತ್ತು ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago