ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..!
ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್
ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆ
ಪಕ್ಕದಲ್ಲಿದ್ದ ನದಿಗೆ ಉರುಳಿದೆ.
ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕುಂದಾಪುರದ ತಾಲ್ಲೂಕಿನ ತೆಕ್ಕಟ್ಟೆ ಗ್ರಾಮದ ನಿವಾಸಿ ಸವಿತಾ ದೇವಾಡಿಗ (57) ಎಂದು ತಿಳಿದುಬಂದಿದೆ.
ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್
ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆ
ಪಕ್ಕದಲ್ಲಿದ್ದ ನದಿಗೆ ಉರುಳಿದೆ.
ಕಾರು ನದಿಯ ನೀರಿನಲ್ಲಿ ಮುಳುಗುತಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ರಕ್ಷಣೆಗೆ ಧಾವಿಸಿ 6 ಜನರನ್ನು ರಕ್ಷಿಸಿದ್ದಾರೆ. ಆದರೆ ಶಂಕರ ದೇವಾಡಿಗ ಅವರ ಪತ್ನಿ ಸವಿತಾ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಪಘಾತದಲ್ಲಿ ಪೆಟ್ಟಾಗಿ ಸಾವಿಗಿಡಾಗಿದ್ದಾರೆ. ಶಂಕರ ದೇವಾಡಿಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಪುತ್ರರಾದ ಅರುಣ್ ದೇವಾಡಿಗ ಮತ್ತು ಅಶ್ವತ್ಥ ದೇವಾಡಿಗ, ಪುತ್ರಿ ಅಮೃತಾ, ಅಳಿಯ ಸುರೇಶ್ ದೇವಾಡಿಗ ಹಾಗೂ ಎರಡೂವರೆ ವರ್ಷದ ಮೊಮ್ಮಗ ಅಭಿಶ್ರೇಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕ್ರೇನ್ ಸಹಾಯದಿಂದ ನದಿಯಿಂದ ಹೊರತೆಗೆಯಲಾಗಿದೆ ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…