ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ
ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ ಕುಂಸಿ ಪೊಲೀಸರು ಬಂಧಿಸಿದ್ದಾರೆ.
ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ ತಂದೆ ಮಲ್ಲೇಶಪ್ಪ, (23) ಹಾಗೂ ಆಕಾಶ್ ತಂದೆ ಮಲ್ಲೇಶಪ್ಪ, (21) ಇವರನ್ನು ವಶಕ್ಕೆ ಪಡೆಯಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಿಥುನ್ ಕುಮಾರ್ ಐ.ಪಿ.ಎಸ್ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಮತ್ತು ಅನಿಲ್ ಕುಮಾರ್ ಭೂಮಾರೆಡ್ಡಿ 1ನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಮತ್ತು ಕಾರಿಯಪ್ಪ ಎ.ಜಿ 2ನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ರವರ ಮಾರ್ಗದರ್ಶದಲ್ಲಿ ವಿಶೇಷ ತಂಡವನ್ನು ಶ್ರೀ ಸಂಜೀವ್ ಕುಮಾರ್ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಬಿ ಉಪವಿಭಾಗರವರ ಸಾರಥ್ಯದಲ್ಲಿ ರಚಿಸಿ, ಆ ವಿಶೇಷ ತಂಡದಲ್ಲಿ ಕುಂಸಿ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ದೀಪಕ್ ಎಂ.ಎಸ್ ಪಿಎಸ್ಐ ಶ್ರೀ ಶಾಂತರಾಜ್, ಹಾಗೂ ಕುಂಸಿ ಪೊಲೀಸ್ ಠಾಣಾ ಸಿಬ್ಬಂದಿಯವರಾದ ಸಿಹೆಚ್ಸಿ, 400 ಶ್ರೀ ಪ್ರಕಾಶ್, ಸಿಹೆಚ್ಸಿ 235 ರಾಘು ಶೇಟ್ಟಿ. ಜೀಪ್ ಚಾಲಕರಾದ ಎ.ಹೆಚ್.ಸಿ 20 ಶಿವಪ್ಪ, ಸಿಪಿಸಿ 1503 ಶ್ರೀ ಶಶಿಧರ ಸಿಪಿಸಿ 1430 ಮಂಜುನಾಥ, ಸಿಪಿಸಿ 1454 ರಘು.ಬಿ. ಸಿಪಿಸಿ 1417 ನಿತೀನ್, ಮತ್ತು ಸಿಪಿಸಿ 1047 ಆದರ್ಶ, ಸಿಪಿಸಿ 1481 ವಿನಾಯಕ ಬಿ.ಟಿ. ಸಿಪಿಸಿ 1422 ಶಶಿಕುಮಾರ್. ಸಿ.ಪಿ.ಸಿ 1875 ಬುರಾನ್, ಜಿಲ್ಲಾ ಪೊಲೀಸ್ ಕಛೇರಿ ತಾಂತ್ರಿಕ ಸಿಬ್ಬಂಧಿಗಳಾದ ಶ್ರೀ ಗುರುರಾಜ. ಶ್ರೀ ಇಂದ್ರೇಶ್, ಮತ್ತು ಶ್ರೀ ವಿಜಯ್ ಕುಮಾರ್ ದಿನೇಶ್ ರಾವ್ ಮತ್ತು ಜಯ್ ಕುಮಾರ್ ರವರನ್ನ ಒಳಗೊಂಡ ತಂಡ ಭರ್ಜರಿ ಬಲೆ ಬೀಸಿತ್ತು.
ಈ ಪ್ರಕರಣದ ಜಾಡನ್ನು ಪತ್ತೆ ಹಚ್ಚಿ, ಪ್ರಕರಣದ ಆರೋಪಿಗಳಾದ ಎl. ಹರೀಶ ತಂದೆ ಮಲ್ಲೇಶಪ್ಪ, (23) ಹಾಗೂ ಎ2 ಆಕಾಶ್ ತಂದೆ ಮಲ್ಲೇಶಪ್ಪ, (21) ಇವರನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಅಮಾನತ್ತು ಪಡಿಸಿಕೊಂಡು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಆರೋಪಿತರ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅಭಿನಂದನೆ ಸಲ್ಲಿಸಿರುತ್ತಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…