RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ
ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆಶ್ರಯದಲ್ಲಿ ಆಯೋಜಿಸಲಾಗುವ ಈದ್ ಮಿಲಾದ್ ಕಾರ್ಯಕ್ರಮದ 2025ನೇ ಸಾಲಿನ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ ಮತ್ತು ಕಾರ್ಯದರ್ಶಿಯಾಗಿ ಮಿಸ್ಸಾಬ್ ಅವರನ್ನು ಆಯ್ಕೆ ಮಾಡಲಾಗಿದೆ.
ಶುಕ್ರವಾರ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಆವರಣದಲ್ಲಿ ಮಸೀದಿ ಸಮಿತಿಯ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು.
ಪ್ರತಿವರ್ಷ ರಿಪ್ಪನ್ ಪೇಟೆಯಲ್ಲಿ ಈದ್ ಮಿಲಾದ್ ಸಂಭ್ರಮವನ್ನು ನಾಲ್ಕು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಮಹಮ್ಮದ್ ಪೈಗಂಬರ್ ರವರ ಹುಟ್ಟುಹಬ್ಬದ ನೆನಪಿಗಾಗಿ ವಿಶ್ವದಾದ್ಯಂತ ನಡೆಯುವ ಈ ಆಚರಣೆ, ರಿಪ್ಪನ್ ಪೇಟೆಯಲ್ಲಿಯೂ ಭಕ್ತಿಭಾವಪೂರ್ಣವಾಗಿ ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗುತ್ತದೆ.
ಈ ವರ್ಷದ ಈದ್ ಮಿಲಾದ್ ಕಾರ್ಯಕ್ರಮವನ್ನು ಇನ್ನಷ್ಟು ಭಾವಪೂರ್ಣವಾಗಿ ನಡೆಸುವ ಉದ್ದೇಶದಿಂದ ನೂತನ ಸಮಿತಿಯನ್ನು ರಚಿಸಲಾಗಿದೆ. ಸಮಾರಂಭದ ಯೋಜನೆ, ಸಾಂಸ್ಕೃತಿಕ ಮತ್ತು ಧಾರ್ಮಿಕ ಚಟುವಟಿಕೆಗಳ ಆಯ್ಕೆ ಹಾಗೂ ಸಾರ್ವಜನಿಕ ಸಹಭಾಗಿತ್ವ ಹೆಚ್ಚಿಸುವ ಬಗ್ಗೆ ಸಮಿತಿಯು ಚಿಂತನೆ ಆರಂಭಿಸಿದೆ.
ಈ ಸಭೆಯಲ್ಲಿ ಧರ್ಮಗುರುಗಳು, ಮುಖಂಡರು, ಯುವಕರು ಹಾಗೂ ಸಮುದಾಯದ ಹಿರಿಯರು ಭಾಗವಹಿಸಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್