ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ
ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ ವಾತಾವರಣ ಮೂಡಿಸಿದೆ.
ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಆರು ಮಂದಿ ದುಷ್ಕರ್ಮಿಗಳು ಬಡಾವಣೆಯ ವಿವಿಧ ರಸ್ತೆಗಳಲ್ಲಿ ಸಂಚರಿಸಿದ್ದು, ಅವರ ಚಟುವಟಿಕೆಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ದೃಶ್ಯಗಳು ಈಗ ಬಹಿರಂಗವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.
ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ.
ಈ ದುಷ್ಕರ್ಮಿಗಳು ಸುಮಾರು ಎರಡೂವರೆ ನಿಮಿಷಗಳ ಕಾಲ ಬಡಾವಣೆಯ ರಸ್ತೆಗಳನ್ನೆಲ್ಲಾ ನಡೆದು ಹೋಗಿದ್ದಾರೆ. ಕೆಲವರು ಮನೆಗಳತ್ತ ಹೊಂಚು ಹಾಕುವ ರೀತಿಯಲ್ಲಿ ನಡೆದುಕೊಂಡಿದ್ದು, ಅವರ ಉದ್ದೇಶದ ಬಗ್ಗೆ ಅನುಮಾನ ಮೂಡಿಸಿದೆ.
ಈ ಘಟನೆ ಶಿವಮೊಗ್ಗದ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…