ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ.

ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ ವಾತಾವರಣ ಮೂಡಿಸಿದೆ.

ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಆರು ಮಂದಿ ದುಷ್ಕರ್ಮಿಗಳು ಬಡಾವಣೆಯ ವಿವಿಧ ರಸ್ತೆಗಳಲ್ಲಿ ಸಂಚರಿಸಿದ್ದು, ಅವರ ಚಟುವಟಿಕೆಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ದೃಶ್ಯಗಳು ಈಗ ಬಹಿರಂಗವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.

ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ.

ಈ ದುಷ್ಕರ್ಮಿಗಳು ಸುಮಾರು ಎರಡೂವರೆ ನಿಮಿಷಗಳ ಕಾಲ ಬಡಾವಣೆಯ ರಸ್ತೆಗಳನ್ನೆಲ್ಲಾ ನಡೆದು ಹೋಗಿದ್ದಾರೆ. ಕೆಲವರು ಮನೆಗಳತ್ತ ಹೊಂಚು ಹಾಕುವ ರೀತಿಯಲ್ಲಿ ನಡೆದುಕೊಂಡಿದ್ದು, ಅವರ ಉದ್ದೇಶದ ಬಗ್ಗೆ ಅನುಮಾನ ಮೂಡಿಸಿದೆ.

ಈ ಘಟನೆ ಶಿವಮೊಗ್ಗದ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

13 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

14 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

14 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

16 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

20 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

20 hours ago