ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ
ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ, ಜುಲೈ 5ರಂದು ಅಲ್ಲಾಬಕ್ಷ್ ಎಂಬುವರು ಮೂರು ಫಂಡ್ಗಳ ಚೀಟಿಗಳನ್ನು ಮುಗಿಸಿಕೊಂಡು, ಫಂಡ್ನಲ್ಲಿ ಉಳಿದ 2 ಲಕ್ಷ ರೂಪಾಯಿ ಹಣ ಮತ್ತು ಫಂಡ್ಗೆ ಸಂಬಂಧಿಸಿದ ಪುಸ್ತಕಗಳನ್ನು ಬ್ಯಾಗ್ನಲ್ಲಿಟ್ಟುಕೊಂಡು ತಮ್ಮ ಸಹೋದರನೊಂದಿಗೆ ಆಟೋದಲ್ಲಿ ಹೊರಟಿದ್ದರು.
ಕೆ.ಆರ್. ಪುರಂ ಬಡಾವಣೆ ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಏಕಾಏಕಿ ಎರಡು ಬೈಕ್ಗಳಲ್ಲಿ ಬಂದ ಐವರು ಕಳ್ಳರು ಆಟೋವನ್ನು ಅಡ್ಡಗಟ್ಟಿದ್ದಾರೆ. ನಂತರ, ಅಲ್ಲಾಬಕ್ಷ್ ಬ್ಯಾಗ್ನಲ್ಲಿದ್ದ ಹಣವನ್ನು ಕಸಿದುಕೊಂಡು, ಅವರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…