ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ ಚಿಕನ್ ಪ್ರಿಯರು..
ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ ಇಂದು ಬೆಳಗ್ಗೆ ನಡೆದಿದೆ.
ಸಾಗರ ತಾಜ್ ಟ್ರೇಡರ್ಸ್ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ ಪಲ್ಟಿಯಾಗಿದೆ. ಇದರಿಂದ ಸುಮಾರು 700ಕ್ಕೂ ಹೆಚ್ಚು ಕೋಳಿಗಳು ರಸ್ತೆಯಲ್ಲಿಯೇ ಅಫಾತಕ್ಕೀಡಾಗಿ ಸಾವನ್ನಪ್ಪಿವೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ.
ಪುಕ್ಸಟ್ಟೆ ಕೋಳಿಗೆ ಮುಗಿಬಿದ್ದ ಜನ: ಕ್ಯಾಂಟರ್ ಲಾರಿಯಿಂದ ರಸ್ತೆಗೆ ಬಿದ್ದಿದ್ದ ನೂರಾರು ಕೋಳಿಗಳು ಒದ್ದಾಡುತ್ತಿದ್ದರೆ, ಇನ್ನೂ ಕೆಲವು ಕೋಳಿಗಳು ಸಾವನ್ನಪ್ಪಿದ್ದವು. ರಸ್ತೆಯಲ್ಲಿ ಬಿದ್ದಿದ್ದ ಕೋಳಿಯನ್ನು ದಾರಿಯಲ್ಲಿ ಹೋಗುವವರು ತಮ್ಮ ವಾಹನವನ್ನು ರಸ್ತೆಯಲ್ಲಿಯೇ ಬಿಟ್ಟು ನನಗೊಂದು, ನಮ್ಮ ಮನೆಗೊಂದು ಎಂಬಂತೆ ಕೋಳಿಗಳನ್ನು ಹಿಡಿದು ತೆಗೆದುಕೊಂಡು ಹೋಗುತ್ತಿದ್ದರು.
ಆದರೆ ಕ್ಯಾಂಟರ್ ಚಾಲಕ ಮೂಕ ಪ್ರೇಕ್ಷಕನಾಗಿ ನಿಂತು ನೋಡುತ್ತಿದ್ದರು. ಸದ್ಯ ಕ್ಯಾಂಟರ್ ಅನ್ನು ರಸ್ತೆಯಿಂದ ತೆರವು ಮಾಡಲಾಗಿದೆ.
ಸ್ಥಳಕ್ಕೆ ಆಗಮಿಸಿದ ಆನಂದಪುರಂ ಪೊಲೀಸರು ಸಂಚಾರ ಮುಕ್ತಗೊಳಿಸಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…