ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು : ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ, “ರಾಜ್ಯದ ಮುಖ್ಯಮಂತ್ರಿಗಳಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರು ಪತ್ರ ಬರೆದು ತಿಳಿಸಿದ್ದಾರೆ. ಇಂದು ಇಂಡಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂ ಅತ್ಯಂತ ಪ್ರಮುಖವಾದುದು. 2 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ನೀರಾವರಿ ಇಲಾಖೆಯಿಂದ ನೀಡಲಾಗುತ್ತಿದೆ” ಎಂದರು.
ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಈ ರಾಜಕಾರಣವನ್ನು ಆನಂತರ ಮಾತನಾಡೋಣ” ಎಂದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…