ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು : ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ, “ರಾಜ್ಯದ ಮುಖ್ಯಮಂತ್ರಿಗಳಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರು ಪತ್ರ ಬರೆದು ತಿಳಿಸಿದ್ದಾರೆ. ಇಂದು ಇಂಡಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂ ಅತ್ಯಂತ ಪ್ರಮುಖವಾದುದು. 2 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ನೀರಾವರಿ ಇಲಾಖೆಯಿಂದ ನೀಡಲಾಗುತ್ತಿದೆ” ಎಂದರು.
ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಈ ರಾಜಕಾರಣವನ್ನು ಆನಂತರ ಮಾತನಾಡೋಣ” ಎಂದರು.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…