ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಶಿವಮೊಗ್ಗ ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್ ಬೆಂಕಿಯಿಂದ ಉರಿಯುತ್ತಿರುವುದು ಕಂಡುಬಂದಿದೆ.
ತಕ್ಷಣವೇ ಕುಟುಂಬದ ಇತರೆ ಸದಸ್ಯರೊಂದಿಗೆ ಸೇರಿಕೊಂಡು ಬೈಕ್ ಗೆ ಹೊತ್ತಿದ್ದ ಬೆಂಕಿ ನಂದಿಸಲಾಗಿದೆ. ಯಾರು ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಓಂಕಾರಪ್ಪ ಅವರು ಮಾಹಿತಿ ನೀಡಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…