DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು
ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ ನ್ಯಾಯಾಲಯ ಜಾಮೀನು ನೀಡಿದೆ.
ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡಮಾನ ಪ್ರಕರಣದ ವಿಚಾರದಲ್ಲಿ ಐ.ಡಿ. ವಶದಲ್ಲಿದ್ದ ಮಂಜುನಾಥ್ ಗೌಡರು ಈ ಹಿಂದೆ ಸಲ್ಲಿಸಿದ್ದರು ಮೂರು ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿದ್ದವು.ಈ ಹಿನ್ನೆಲೆ ಸರಿ ಸುಮಾರು ಎರಡುವರೆ ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಆರ್.ಎಂ. ಮಂಜುನಾಥ್ ಅವರು ಜಾಮೀನು ಕೋರಿ ಗೌಡ ಮೊರೆ ಹೋಗಿದ್ದರು. ನ್ಯಾಯಾಲಯ ಇಂದು ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.
ಏನಿದು ಪ್ರಕರಣ :
ಕರ್ನಾಟಕ ಪೊಲೀಸರು ಸಲ್ಲಿಸಿದ ದೂರು ಮತ್ತು ಆರೋಪಪಟ್ಟಿಯ ಪ್ರಕಾರ, ಸದರಿ ಬ್ಯಾಂಕಿನ ಮಾಜಿ ಶಾಖಾ ವ್ಯವಸ್ಥಾಪಕಿ ಬಿ. ಶೋಭಾ, ಇತರ ಸಹ-ಆರೋಪಿಗಳೊಂದಿಗೆ ಪಿತೂರಿ ನಡೆಸಿ, ನಕಲಿ ಚಿನ್ನ ಅಡವಿಟ್ಟುಕೊಂಡು 62.77 ಕೋಟಿ ಸಾಲ ನೀಡಲಾಗಿದೆ ಎಂಬ ಆರೋಪ ಹೊರಿಸಲಾಗಿತ್ತು.
‘ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್, ನಗರ ಶಾಖೆಯಲ್ಲಿ ದೊಡ್ಡ ಪ್ರಮಾಣದ ಹಣ ದುರುಪಯೋಗ ನಡೆದಿದೆ’ ಎಂದು ಇಡಿ ತನಿಖೆಯಲ್ಲಿ ಕಂಡುಬಂದಿದೆ. ಆರ್.ಎಂ ಮಂಜುನಾಥ ಗೌಡ ಸೂಚನೆಯ ಮೇರೆಗೆ ಶಾಖಾ ವ್ಯವಸ್ಥಾಪಕಿ ಬಿ. ಶೋಭಾ ಸಾಲ ನೀಡಿದ್ದಾರೆ’ ಎಂದು ಇಡಿ ಹೇಳಿದೆ.
‘ಬಿ. ಶೋಭಾ ಇತರ ಸಹ-ಆರೋಪಿಗಳೊಂದಿಗೆ ಪಿತೂರಿ ನಡೆಸಿ ಸೃಷ್ಟಿಸಿ, ಪಡೆದ ಹಣವನ್ನು ಮಂಜುನಾಥ್ ಗೌಡರಿಗೆ ಹಸ್ತಾಂತರಿಸಲಾಗಿದೆ’ ಎಂದು ಇಡಿ ಆರೋಪಿಸಿದೆ. ಜೊತೆಗೆ ಈ ಅಕ್ರಮ ಹಣದಿಂದ ವಿವಿಧ ಚರ ಮತ್ತು ಸ್ಥಿರ ಆಸ್ತಿಗಳನ್ನು ಸಂಪಾದಿಸಿದ್ದಾರೆ ಮತ್ತು ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯ ಪ್ರಕಾರ, ತಮ್ಮ ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಹೊಂದಿರುವುದು ಕಂಡುಬಂದಿದೆ’ ಎಂದು ED ತಿಳಿಸಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…