ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ
ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಜೈನುಲ್ಲಾ ಬಿನ್ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರಾದ ಮೂವರೂ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ ಗ್ರಾಮದವರೆನ್ನಲಾಗುತ್ತಿದ್ದು, ಕೆಲಸದ ನಿಮಿತ್ತ ಬಾಣಾವರಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನೆಯ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…
ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…
ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…