ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ –

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಜೊತೆಗೆ ಮುಂಗಾರು ಮಳೆ ಸಹ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ತಮ್ಮ ಜಮೀನುಗಳನ್ನು ಹದಮಾಡಿಟ್ಟುಕೊಂಡು, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಖಾಸಗಿ ಅಂಗಡಿಗಳಿಗೆ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ಮುಗಿಬೀಳುತ್ತಿದ್ದಾರೆ.

ಆದರೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಯೂರಿಯಾ ಗೂಬ್ಬರ ರೈತರಿಗೆ ಸಮರ್ಪಕವಾಗಿ ಗೊಬ್ಬರ ದೊರೆಯದೇ ರೈತರಿಗೆ ಸಂಕಷ್ಟ ಉಂಟಾಗಿದೆ.

ಬಂಕಾಪುರದಲ್ಲಿ ರೈತ ಸಂಪರ್ಕ ಸೊಸೈಟಿ ಅವರಿಂದ ರೈತರಿಗೆ ಸಹಾಯವಾಗಲು 15 ಟನ್ ಯೂರಿಯಾ ಗೊಬ್ಬರವನ್ನು  ತರಸಿ ರೈತರ ಮೂಗಿಗೆ ತುಪ್ಪ ವರೆಸಿದಂಯಾಯಿತು. ಸಮರ್ಪಕವಾಗಿ ಸಿಗದ ಗೊಬ್ಬರಕ್ಕೆ ರೈತರೆಲ್ಲರೂ ಗುಂಪು ಸೇರಿಕೊಂಡು ಚಿರಾಡುತ್ತಾ, ಕೇಕೆ ಹೊಡಿಯುತ್ತಾ. ಗದ್ದಲದ ಗೊಂದಲ ಉಂಟಾಯಿತು. ರೈತರು ಬೆಳಗಿನ ಜಾವ 5  ಗಂಟೆಗೆ ರೈತ ಸಂಪರ್ಕ ಸೊಸೈಟಿಗೆ ಬಂದು ಸದರಿಯಲ್ಲಿ ನಿಂತರೂ ಕೂಡ ನಮಗೆ ಗೊಬ್ಬರ ಕೊಡುತ್ತಿಲ್ಲವೆಂದು ರೈತರ ಆಕ್ರೋಶ ವ್ಯಕ್ತಪಡಿಸಿದರು.

ಮುಂಜಾನೆಯಿಂದಲೇ ಸರತಿಯಲ್ಲಿ ನಿಲ್ಲಬೇಕಾಗುತ್ತದೆ. ನಮ್ಮ ಕೆಲಸ ಬಿಟ್ಟು ಬಿತ್ತನೆ ಬೀಜ ಖರೀದಿ ಮಾಡುವುದೇ ಕೆಲಸವಾಗಿದೆ ಆದರೆ ಕ್ಯೂ ನಲ್ಲಿದ್ದವರನ್ನು ಬಿಟ್ಟು ಅಧಿಕಾರಿಗಳೊಡನೆ  ಮಾತನಾಡಿ ನೇರವಾಗಿ ಯೂರಿಯಾ ಗೊಬ್ಬರ ಚೀಲಗಳನ್ನು ಒಯ್ಯತ್ತಿದ್ದರು. ಸೊಸೈಟಿ ಅವರು ರೈತರಿಗೆ ಪ್ರತಿಯೊಬ್ಬರಿಗೂ ಗೊಬ್ಬರ ಸಿಗಬೇಕೆಂದು ಒಂದು ಹೊಲದ ಖಾತೆಯವರಿಗೆ ಗೊಬ್ಬರದ ಎರಡು ಚೀಲ ವೆಂದು ಹೇಳಿ, ಅಧಿಕಾರಿಗಳು ತಮಗೆ ಬೇಕಾದವರಿಗೆ ಐದರಿಂದ ಹತ್ತು ಚೀಲ ದಂತೆ  ಸಾಗಿಸಿದರು. ಸದರಿಯಲ್ಲಿ ನಿಂತ ರೈತರಿಗೆ ಗೊಬ್ಬರ ಇಲ್ಲದಂತಾಯಿತು. ಯೂರಿಯಾ ಗೊಬ್ಬರ ಪಡೆಯದ ರೈತರು ಅಧಿಕಾರಿಗಳೊಡನೆ ಆಕ್ರೋಶ ವ್ಯಕ್ತಪಡಿಸಿದರು.

ವರದಿ  : ನಿಂಗರಾಜ್ ಕುಡಲ್ ಹಾವೇರಿ ಜಿಲ್ಲೆ ಬಂಕಾಪುರ್

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

20 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

21 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago