ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ
ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ ಒಬ್ಬ ವ್ಯಕ್ತಿ ತನ್ನ ಬಳಿ ಇದ್ದ ಚಾಕುವಿನಿಂದ ಇನ್ನೊಬ್ಬ ಸ್ನೇಹಿತನ ಮೇಲೆ ಏಕಾಏಕಿ ಇರಿದಿದ್ದಾನೆ.
ಸಮೀಪದಲ್ಲಿದ್ದ ಸಾರ್ವಜನಿಕರು ತಕ್ಷಣವೇ ದಾಳಿಕೋರನನ್ನು ತಡೆದು, ಗಾಯಗೊಂಡ ವ್ಯಕ್ತಿಗೆ ಪ್ರಥಮ ಚಿಕಿತ್ಸೆಗೆ ನೆರವಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ದೊಡ್ಡಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…