ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ.
ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.
2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ ತೀರ್ಪು ನೀಡಿದೆ. ಅಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲ ನಗರದಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಅಂದಿನ ಡಿವೈಎಸ್ಪಿ ಶಾಂತವೀರ ನೇತೃತ್ವದ ತಂಡ ದಾಳಿ ನಡೆಸಿತ್ತು.
ಪಶ್ಚಿಮ ಬಂಗಾಳ ಮೂಲದ 1) ಅಲೋಕ್ ಮಂಡಲ್ (34), 2) ಶ್ರೀಬಾಷ್ ಸರ್ಕಾರ್ (20), 3) ಅಮ್ರಿತ್ ಮಂಡಲ್ (27), 4) ಸಂಕರ್ ಬ್ಯಾಪಾರಿ (28) ಮತ್ತು 5) ಹರಧನ್ ಮಂಡಲ್ (32) ಎಂಬುವರನ್ನು ಬಂಧಿಸಿದ್ದ ಪೊಲೀಸ್ ತಂಡ ಒಟ್ಟಾರೆ,. 1 ಕೆಜಿ 564 ಗ್ರಾಂ ತೂಕದಗಾಂಜಾ , ₹3550 ನಗದು ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿತ್ತು. ಅಷ್ಟೆ ಅಲ್ಲದೆ, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii)(B), 27(b) NDPS ಕಾಯ್ದೆ ಅಡಿ ಕೇಸ್ ದಾಖಲಿಸಿತ್ತು.
ಈ ಪ್ರಕರಣ ಸಂಬಂಧ ಆಗಿನ ತನಿಖಾಧಿಕಾರಿ, ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿ.ಐ. ಅಶ್ವತ್ ಗೌಡ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಬಳಿಕ ಕೋರ್ಟ್ನಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸುರೇಶ್ ಕುಮಾರ್ ಎ.ಎಂ. ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ನೀಡಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…