ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ

ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅರಸಾಳು ಗ್ರಾಮದ ನಿವಾಸಿ ಮಂಜಯ್ಯ ಟಿ(59) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಕೊಟೇತಾರಿಗ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯ ನಿರ್ವಹಿಸುತಿದ್ದ ಟಿ ಮಂಜಯ್ಯ ಮೂಲತಃ ಹರಮಘಟ್ಟ ಗ್ರಾಮದವರು.

ನಡೆದಿದ್ದೇನು..!??

ಶಾಲೆಯ ಕರ್ತವ್ಯ ಮುಗಿಸಿಕೊಂಡು ರಿಪ್ಪನ್ ಪೇಟೆಯಿಂದ ಅರಸಾಳು ಕಡೆಗೆ ತೆರಳುತಿದ್ದ ಮಂಜಯ್ಯ ರವರ ಸ್ಟಾರ್ ಸಿಟಿ ಬೈಕ್ ( KA14 Z 6775) ಬೈಕ್ ಗೆ ಎದುರಿನಿಂದ ಬಂದ ಹಿರೋ ಹೋಂಡಾ ಸ್ಪೆಂಡರ್ (KA15 V 0159) ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತದೇಹವನ್ನು ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

ಸ್ಥಳಕ್ಕೆ ರಿಪ್ಪನ್ ಪೇಟೆ ಪಿಎಸ್‌ಐ ರಾಜುರೆಡ್ದಿ ಹಾಗೂ ಸಿಬ್ಬಂದಿಗಳು ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹೆಲ್ಮೆಟ್ ಇದ್ದರೂ ಧರಿಸದೇ ಜೀವಕ್ಕೆ ಕುತ್ತು ತಂದುಕೊಂಡ ಮಂಜಯ್ಯ ಮಾಸ್ಟರ್

ಬೈಕ್ ಚಲಾಯಿಸುವಾಗ ಯಾವಾಗಲೂ ಹೆಲ್ಮೆಟ್ ಧರಿಸುವ ಶಿಕ್ಷಕ ಮಂಜಯ್ಯ ನವರು ಇಂದು ಹೆಲ್ಮೆಟ್ ಧರಿಸದೇ ಇದ್ದ ಕಾರಣ ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.ಒಂದು ವೇಳೆ ಘಟನೆ  ನಡೆಯುವಾಗ ಹೆಲ್ಮೆಟ್ ಧರಿಸದೇ ಮಿರರ್ ಗೆ ಸಿಲುಕಿಸಿಕೊಂಡಿದ್ದಾರೆ ಒಂದು ವೇಳೆ ಹೆಲ್ಮೆಟ್ ಧರಿಸಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲವೇನೋ..

ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ :

ಅಪಘಾತ ಸಂಭವಿಸಿದಾಗ ಹೆಲ್ಮೆಟ್ ಇಲ್ಲದಿದ್ದರೆ ತಲೆಗೆ ತೀವ್ರ ಪೆಟ್ಟಾಗಿ ಪ್ರಾಣಕ್ಕೆ ಅಪಾಯವಾಗಬಹುದು. ಮಿರರ್‌ಗೆ ಸಿಲುಕಿಸಿದ ಹೆಲ್ಮೆಟ್ ಯಾವುದೇ ಕಾರಣಕ್ಕೂ ನಿಮ್ಮ ಪ್ರಾಣ ರಕ್ಷಿಸುವುದಿಲ್ಲ, ಕೆಲವು ಬಾರಿ ಮಿರರ್‌ಗೆ ಸಿಲುಕಿಸಿದ ಹೆಲ್ಮೆಟ್ ಸಡಿಲವಾಗಿ ಬಿದ್ದು, ಹಿಂಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗಬಹುದು. ಹೆಲ್ಮೆಟ್ ಧರಿಸುವುದು ನಿಮ್ಮ ಸುರಕ್ಷತೆಗಾಗಿ. ನಿಮ್ಮ ಜೀವದ ಮೌಲ್ಯವನ್ನು ಅರಿತುಕೊಳ್ಳಿ.ನೆನಪಿಡಿ, ಹೆಲ್ಮೆಟ್ ಎಂಬುದು ಕೇವಲ ದಂಡ ತಪ್ಪಿಸಿಕೊಳ್ಳುವ ಸಾಧನವಲ್ಲ, ಅದು ನಿಮ್ಮ ಜೀವ ಉಳಿಸುವ ರಕ್ಷಾಕವಚ. ಜವಾಬ್ದಾರಿಯುತ ಚಾಲಕರಾಗಿ, ನಿಮ್ಮ ಮತ್ತು ಇತರರ ಸುರಕ್ಷತೆಗೆ ಆದ್ಯತೆ ನೀಡಿ. ಸುರಕ್ಷಿತವಾಗಿ ಚಲಾಯಿಸಿ, ಜೀವ ಉಳಿಸಿ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

16 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

18 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago