ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು
ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ.
ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ.
ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ ಕಾರ್ಯನಿಮಿತ್ತ ಕಾರಿನಲ್ಲಿ ತೆರಳುತಿದ್ದಾಗ ಆಯನೂರು ಸರ್ಕಲ್ ನಲ್ಲಿ ಕಾರು ಚಾಲನೆಯಲ್ಲಿದ್ದಾಗಲೇ ಏಕಾಏಕಿ ಎದೆ ನೋವು ಎಂದು ಪಕ್ಕದಲ್ಲಿದ್ದ ವ್ಯಕ್ತಿಯ ಬಳಿ ಹೇಳಿ ಕೂಡಲೇ ಮೂರ್ಚೆ ಹೋಗಿದ್ದಾರೆ.ತಕ್ಷಣ ಸಹಸವಾರ ಕಾರಿನ ಬ್ರೇಕ್ ಹಾಕಿ ನಿಲ್ಲಿಸಿ ಏನಾಗಿದೆ ಎಂದು ವಿಚಾರಿಸಿದ್ದಾರೆ.
ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ.
ಮೃತರು ಪತ್ನಿ, ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್