ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು
ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ.
ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ ಕಾರ್ಯನಿಮಿತ್ತ ಕಾರಿನಲ್ಲಿ ತೆರಳುತಿದ್ದಾಗ ಆಯನೂರು ಸರ್ಕಲ್ ನಲ್ಲಿ ಕಾರು ಚಾಲನೆಯಲ್ಲಿದ್ದಾಗಲೇ ಏಕಾಏಕಿ ಎದೆ ನೋವು ಎಂದು ಪಕ್ಕದಲ್ಲಿದ್ದ ವ್ಯಕ್ತಿಯ ಬಳಿ ಹೇಳಿ ಕೂಡಲೇ ಮೂರ್ಚೆ ಹೋಗಿದ್ದಾರೆ.ತಕ್ಷಣ ಸಹಸವಾರ ಕಾರಿನ ಬ್ರೇಕ್ ಹಾಕಿ ನಿಲ್ಲಿಸಿ ಏನಾಗಿದೆ ಎಂದು ವಿಚಾರಿಸಿದ್ದಾರೆ.
ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ.
ಮೃತರು ಪತ್ನಿ, ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…