ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು
ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು.
ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು ಸಿಗಂಧೂರು ಚೌಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನಾಗಪುರದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಸಾಗರಕ್ಕೆ ತೆರಳಿದರು.
ಸಾಗರ ಹೆಲಿಪ್ಯಾಡ್ನಿಂದ ಸಿಗಂದೂರಿಗೆ ಪ್ರಯಾಣಿಸಿ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಪೂಜೆ ಸಲ್ಲಿಸಿದರು. ಸೇತುವೆ ಲೋಕಾರ್ಪಣೆಯ ಬಳಿಕ, ಸಾಗರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸೇತುವೆಯ ಬಗ್ಗೆ ಜನಪ್ರತಿನಿಧಿಗಳು ಹರ್ಷ ವ್ಯಕ್ತಪಡಿಸಿ ಸೇತುವೆಯನ್ನು ಅಧಿಕೃತವಾಗಿ ಲೋಕಾಪರ್ಣೆಗೊಳಿಸಿದರು. ಈ ವೇಳೆ ತುಮರಿ ಸಾಗರ ಭಾಗದ ಸಾವಿರಾರು ಮಂದಿ ಉಪಸ್ಥಿತರಿದ್ದರು.
ಈ ಸೇತುವೆಯು ಶರಾವತಿ ಹಿನ್ನೀರಿನಿಂದಾಗಿ ಸಂಪರ್ಕ ಕಳೆದುಕೊಂಡಿದ್ದ ಸಾವಿರಾರು ಜನರ ದಶಕಗಳ ಬೇಡಿಕೆಯಾಗಿದ್ದು, ಮಲೆನಾಡು ಭಾಗದ ಸಂಪರ್ಕ ವ್ಯವಸ್ಥೆಗೆ ಹೊಸ ಆಯಾಮ ನೀಡಲಿದೆ.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…