ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ
ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆದಿದೆ.
ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69) ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಅರಸಾಳು ಗ್ರಾಪಂ ವ್ಯಾಪ್ತಿಯ ಒಂಬತ್ತನೇ ಮೈಲಿಕಲ್ಲು ಬಳಿ ರಿಪ್ಪನ್ ಪೇಟೆಯಿಂದ ಸೂಡೂರಿನಲ್ಲಿರುವ ತಮ್ಮ ಜಮೀನಿಗೆ ಹೋಗುತ್ತಿರುವಾಗ ಹಿಂಬದಿಯಿಂದ ಏಕಾಏಕಿ ವೇಗವಾಗಿ ಬಂದ ಅಪರಿಚಿತ ಕಾರು ಡಿಕ್ಕಿಯಾಗಿ ಬೈಕ್ ಸವಾರ ನೆಲಕ್ಕುರುಳಿದ್ದಾರೆ ಆದರೆ ಅಪರಿಚಿತ ವಾಹನದ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ.ಈ ಸಂಧರ್ಭದಲ್ಲಿ ಸ್ಥಳದಲ್ಲಿದ್ದ ಆಲುವಳ್ಳಿ ಗ್ರಾಮದ ಯುವಕರು ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ.
ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…