ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು

ಶಿವಮೊಗ್ಗ : ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯ, ಪ್ರತಿಭಾ ಪುರಸ್ಕಾರ ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಪತ್ರಕರ್ತರಿಗೆ ಪೋಲೀಸರಿಗೆ ಕುಟುಂಬದವರೊಂದಿಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಹಬ್ಬ ಹರಿದಿನಗಳಲ್ಲಿಯೂ ದೂರವಿರಬೇಕಾಗುತ್ತದೆ. ಪತ್ರಕರ್ತರು ಎಲ್ಲರ ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತಾರೆ. ಆದರೆ ಅವರ ಕಾರ್ಯಕ್ರಮಕ್ಕೆ ಯಾರೂ ಬರುವುದಿಲ್ಲ. ಪ್ರಸ್ತುತ ದೇಶದಲ್ಲಿ ಈಗ ಸುಮಾರು 80 ಸಾವಿರ ಪತ್ರಿಕೆಗಳು, 800ಕ್ಕೂ ಅಧಿಕ ಟಿವಿ ಚಾನಲ್‌ಗಳು ಇವೆ. ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿದೆ. ರಾಜಕಾರಣಿಗಳು, ಉದ್ಯಮಿಗಳು, ಧರ್ಮಗುರುಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಮತದಾರರು , ಕಾರ್ಮಿಕರು, ರೈತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ. ಧ್ವನಿ ಎತ್ತಿದವರನ್ನು ದಮನ ಮಾಡಲಾಗುತ್ತಿದೆ ಎಂದು ಹೇಳಿದರು.

ಮಾಧ್ಯಮ ಕ್ಷೇತ್ರದ ದೊಡ್ಡ ಶತ್ರುಗಳು ರಾಜಕಾರಣಿಗಳು, ಆದರೆ ರಾಜಕಾರಣಿಗಳನ್ನು ಬೈದು ದಕ್ಕಿಸಿಕೊಳ್ಳಬಹುದು. ಧರ್ಮಗುರುಗಳನ್ನು ಬೈದರೆ ನೋಟೀಸ್ ಕೊಡುತ್ತಾರೆ. ಇದುವರೆಗೂ ಯಡಿಯೂರಪ್ಪ, ಸಿದ್ದರಾಮಯ್ಯ, ದೇವೇಗೌಡರು ನೋಟೀಸ್ ನೀಡಿದ ಉದಾಹರಣೆಗಳು ಇಲ್ಲ. ಆದರೆ ಧರ್ಮಗುರುಗಳ ಬಗ್ಗೆ ಮಾತನಾಡಿದರೆ, ತಲೆ ಹೋಗುತ್ತದೆ ಎಂದರು.

ಮಾಧ್ಯಮ ಉದ್ಯಮವಾದರೆ ತೊಂದರೆ ನಿಜ. ಸಮಾಜ ಸೇವೆಗಾಗಿ ಯಾರೂ ಪತ್ರಿಕೆ ಚಾನಲ್ ಮಾಡುವುದಿಲ್ಲ. ಉದ್ಯಮ ಲಾಭಗಳಿಕೆಯ ಉದ್ದೇಶವಾಗಿರುತ್ತದೆ. ಕರ್ನಾಟಕದ ಬಜೆಟ್ 4 ಲಕ್ಷ ಕೋಟಿ ರೂ. ಆದರೆ, ಅಂಬಾನಿ 8 ಲಕ್ಷ ಕೋಟಿ ರೂ. ಅದಾನಿ 14 ಲಕ್ಷ ಕೋಟಿ ರೂ. ಸಂಪತ್ತು ಹೊಂದಿದ್ದಾರೆ. 4 – 5 ಅಂಬಾಬಿ ಅದಾನಿ ಸೇರಿದರೆ ದೇಶದ ಸಂಪತ್ತಿನಷ್ಟಾಗುತ್ತದೆ. ಅವರು ಕೂಡ ಮಾಧ್ಯಮ ಕ್ಷೇತ್ರವನ್ನು ವ್ಯಾಪಿಸಿಕೊಳ್ಳುತ್ತಿದ್ದಾರೆ. ಅಂತವರಿಗೆ ಲಾಭ ಗಳಿಕೆಗಿಂತ ಸಾಮ್ರಾಜ್ಯದ ರಕ್ಷಣೆ ಮುಖ್ಯವಾಗಿರುತ್ತದೆ. ಬೇಕಾದರೆ ಪತ್ರಿಕೆಗಳನ್ನು ಉಚಿತವಾಗಿ ಕೊಟ್ಟು ಬಿಡುತ್ತಾರೆ ಎಂದರು.

ಉದ್ಯಮಿಗಳು ಮತ್ತು ಧರ್ಮಗುರುಗಳಿಗೆ ಮಾಧ್ಯಮ ಆಯುಧವಾಗಿದೆ. ಯಾವುದೇ ಧರ್ಮ ಗುರುಗಳ ವಿರುದ್ಧ ಬರೆದು ದಕ್ಕಿಸಿಕೊಳ್ಳುವುದು ಕಷ್ಟ. ದೇವರ ನಡುವೆ ಏಜೆಂಟರ್ ಬೇಕಾಗಿಲ್ಲ. ಜನ ಈಗಲೂ ದಿನಪತ್ರಿಕೆಗಳನ್ನು ನಂಬುತ್ತಾರೆ. ಪತ್ರಿಕೆಗಳ ವಿಶ್ವಾಸರ್ಹತೆಯನ್ನು ಕೊಂದರೆ ಜನ ನಂಬುವುದಿಲ್ಲ ಪತ್ರಿಕೆಗಳು ರದ್ದಿಯಾಗುತ್ತವೆ. ಅದಕ್ಕಾಗಿ ಪತ್ರಿಕೆಗಳ ವಿಶ್ವಾಸರ್ಹತೆ ಕಳೆಯುತ್ತಿದ್ದಾರೆ ಎಂದರು.

ಪ್ರಾಮಾಣಿಕತೆ ಪತ್ರಕರ್ತರಿಗೆ ಮುಖ್ಯ. ಭ್ರಷ್ಟಚಾರ ಹೊಂದಾಣಿಕೆ ಇಲ್ಲದ ಕ್ಷೇತ್ರಗಳು ಈಗ ಇಲ್ಲವಾಗಿವೆ. ಉದ್ಯಮಿಗಳು, ಧರ್ಮಗುರುಗಳ ಬಗ್ಗೆ ಬರೆಯುವುದಿಲ್ಲ. ಸಾಮಾನ್ಯ ಓದುಗರಿಗೆ ಇದು ಅರ್ಥವಾಗುವುದಿಲ್ಲ. ಓದುಗರಿಗೂ ಜವಾಬ್ದಾರಿ ಇರುತ್ತದೆ. ರೈತರು ತಾವು ಬೆಳೆದ ಉತ್ಪನಗಳಿಗೆ ಬೆಳೆ ನಿರ್ಧಾರ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಉತ್ಪನಕ್ಕಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿವುದು ರೈತರ ಬೆಳೆ ಮತ್ತು ಪತ್ರಿಕೆಗಳು ಎಂದರು.

ಸಂಸದ ಬಿ.ವೈ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಶಾಖೆ ಅಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್.ರವಿಕುಮಾರ್, ರಾಷ್ಟ್ರೀಯ ಮಂಡಳಿ ಸದಸ್ಯ ಭಂಡಿಗಡಿ ನಂಜುಡಪ್ಪ, ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್, ಕಾರ್ಯದರ್ಶಿ ಕೆ.ಆರ್.ಸೋಮನಾಥ್, ಖಜಂಚಿ ರಂಜಿತ್, ಉಪಸ್ಥಿತರಿದ್ದರು. ವೈದ್ಯ ಸ್ವಾಗತಿಸಿದರು, ದೀಪಕ್‌ಸಾಗರ್ ನಿರೂಪಿಸಿದರು, ಹುಮಾಯೂನ್ ಹರ್ಲಾಪುರ್ ಸಂಗಡಿಗರಿಗೆ ವಚನ ಗಾಯನ ಕಾರ್ಯಕ್ರಮ ನಡೆಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 hour ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 hour ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 hour ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

1 hour ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

10 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago