ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ
HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು.
ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಹೃದಯಾಘಾತ ಸಾವು ದಿನೇ ದಿನೇ ಏರುತ್ತಿದೆ ಈವರೆಗೂ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿಲ್ಲ. ಸಂಪುಟದ ಕೆಲವು ಸದಸ್ಯರ ಮೇಲೆ ಭ್ರಷ್ಟಾಚಾರ ನಡೆಸಿದ ಶಾಸಕರು ಮತ್ತು ಮಾಧ್ಯಮದವರು ನಿತ್ಯ ಸುದ್ದಿ ಮಾಡಿದರು ಸಹ ಆಡಳಿತಾತ್ಮಕವಾಗಿ ಯಾವುದೇ ದಿಟ್ಟ ನಿರ್ಧಾರ ಕೈಗೊಳ್ಳುವಲ್ಲಿ ಮುಖ್ಯಮಂತ್ರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ದಿನನಿತ್ಯ ಕುರ್ಚಿಗಾಗಿ ಮುಸುಕಿನ ಗುದ್ದಾಟದಲ್ಲಿ ಸಮಯ ಕಳೆಯುತ್ತಿದ್ದಾರೆ. ಸರ್ಕಾರದಿಂದ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ ಅಧಿಕಾರಿಗಳ ಜೊತೆ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಆರ್.ಸಿ.ಬಿ ಯಂತಹ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವೇ ನೇರ ಕಾರಣವಾದರೂ ಕೆಲವು ಅಧಿಕಾರಿಗಳ ಸೇವೆ ವಜಾ ಮಾಡಿದರು ಸಹ ಇದಕ್ಕೆ ನೇರ ಕಾರಣ ಕರ್ತರಾದ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಮುಂದೆ ಕ್ಷಮೆ ಈವರೆಗೂ ಕೋರಲಿಲ್ಲ. ಉಡಾಫೆಯನ್ನು ನೀಡಿ ರಾಜ್ಯದ ಜನತೆಯನ್ನು ಮತ್ತು ಮಡಿದವರ ಕುಟುಂಬವನ್ನು ನಿರ್ಲಕ್ಷಿಸಿದ್ದಾರೆ.
ರಾಜ್ಯದ ಅಭಿವೃದ್ಧಿಯನ್ನು ಸರಿಪಡಿಸಲು ಹಣಕಾಸು ಬಿಕ್ಕಟ್ಟು ಇಬ್ಬರು ಸಹ ಸರಿಪಡಿಸಲು ಪ್ರಯತ್ನಿಸುತ್ತಿಲ್ಲ ಗುತ್ತಿಗೆದಾರರಿಗೆ ಈವರೆಗೂ ಹಣ ಪಾವತಿಸಿಲ್ಲ ರಾಜ್ಯದ ಖಜಾನೆ ಖಾಲಿ ಮಾಡಲು ಗುತ್ತಿಗೆದಾರರಿಗೆ ಅಖಂಡ ನೀತಿಯೇ ಕಾರಣ. 2025-26ನೇ ಸಾಲಿನ ಬಜೆಟ್ ರಾಜ್ಯದಲ್ಲಿ ಮಂಡಿಸಿ ಅನುಮೋದನೆ ನೀಡಿದ ಹಣಕಾಸನ್ನು ಯಾವುದೇ ಇಲಾಖೆ ಯೋಜನೆಗಳಿಗೆ ಈವರೆಗೂ ನೀಡಲಾಗಿಲ್ಲ. ಕಾರಣ ಆರ್ಥಿಕ ಬಿಕ್ಕಟ್ಟು ತಲೆದೋರಿದೆ.
ಮುಂದಿನ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವನ್ನು ನಡೆಸಲು ಆಡಳಿತಾತ್ಮಕ ಆರ್ಥಿಕ ತೊಂದರೆ ಅನುಭವಿಸುತ್ತಿರುವ ಹಾಗೂ ಕುರ್ಚಿಯ ಮುಸುಕಿನ ಗುದ್ದಾಟದಿಂದ ಸರ್ಕಾರ ನೈತಿಕವಾಗಿ ನಡೆಸುವ ಸ್ಥೈರ್ಯವಿಲ್ಲದೇ ಇರುವ ಕಾರಣ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಮನೆಗಳ ಹಂಚಿಕೆಯಲ್ಲಿ ವ್ಯಾಪಕವಾಗಿದೆ ಭ್ರಷ್ಟಾಚಾರ ನಡೆದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೇ ನೇರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ರವರ ವಿರುದ್ಧ ಆಪಾದನೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಭ್ರಷ್ಟಾಚಾರ ಹೊತ್ತಿರುವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ರವರನ್ನು ಮತ್ತು ಎಸ್.ಸಿ.ಎಸ್.ಟಿ ವಾಲ್ಮೀಕಿ ನಿಗಮದ ಅಧ್ಯಕ್ಷ ನಾಗೇಂದ್ರ ರವರನ್ನು ಸಂಪುಟದಿಂದ ವಜಾಗೊಳಿಸದೇ ಮುಂದುವರಿಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ಕಾರಣದಿಂದ ಕೂಡಲೇ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರನ್ನು ಈ ಮನವಿ ಪತ್ರ ನೀಡುವುದರ ಮೂಲಕ ಕೋರಿದೆ.
ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಮಾಜಿ ಅಧ್ಯಕ್ಷ ಎಂ. ವಿ ಜಯರಾಮ್, ಟೌನ್ ಪಂಚಾಯತಿ ಮಾಜಿ ಅಧ್ಯಕ್ಷ ಚಂದ್ರಪ್ಪ, ರಾಮಣ್ಣ, ರಮಾನಂದ, ಮೂರ್ತಿ ಕೃಷ್ಣ ಆರ್.ಎನ್ ಮಂಜುನಾಥ್, ಕಾಯಿ ನಾಗೇಶ ಇನ್ನೂ ಮುಂತಾದವರು ಇದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…