ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ
ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರಂತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನಪು ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ಅಧ್ಯಕ್ಷ ಸುಧೀರ್ ಪಿ , ಕಾರ್ಯದರ್ಶಿ ಮುರುಳಿ ಕೆರೆಹಳ್ಳಿ ,ಆರ್ ಎಸ್ ಎಸ್ ತಾಲೂಕ್ ಸಹ ಕಾರ್ಯನಿರ್ವಾಹಕ ಕಾರ್ತಿಕ್ ,ಪ್ರಮುಖರಾದ ಮೆಣಸೆ ಆನಂದ್ , ಸುಂದರೇಶ್ ಕೆರೆಹಳ್ಳಿ , ಪದ್ಮಾ ಸುರೇಶ್ , ನಾಗರತ್ನ ದೇವರಾಜ್ , ರಾಘವೇಂದ್ರ, ಸಂಜಯ್. ಮಂಜುನಾಥ್ , ಲೋಹಿತ್ , ಗಣೇಶ್ ,ಉದಯ್ , ಶಶಿಧರ್ ,ಫ್ಯಾನ್ಸಿ ರಮೇಶ್ , ಮಹಮ್ಮದ್ ಹುಸೇನ್, ರೇಖಾ ರವಿ, ನಾಗರತ್ನ ದೇವರಾಜ್. ಹಾಗು ಇನ್ನೂ ಹಲವಾರು ದೇಶಪ್ರೇಮಿಗಳು ಭಾಗಿಯಾಗಿ ಪುಷ್ಪ ನಮನವನ್ನು ಸಲ್ಲಿಸಿದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…