ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಗುರುವಾರ ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು.
ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ, “ಮಾಜಿ ಸಚಿವರು ಹಾಗೂ ಆತ್ಮೀಯರಾದ ಕಿಮ್ಮನೆ ರತ್ನಾಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತ ಅವರಿಗೆ ಆಯುರಾರೋಗ್ಯ ನೀಡಿ, ಸಕಲ ಇಷ್ಟಾರ್ಥಗಳನ್ನು ಈಡೇರಿಸಲಿ” ಎಂದು ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದು, ಕಿಮ್ಮನೆ ರತ್ನಾಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…