ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ
ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು ನೀಡುವುದಾಗಿ ಭರವಸೆ ನೀಡಿದ ನಂತರ, ಒಬ್ಬರು ₹2.5 ಲಕ್ಷ ಹಾಗೂ ಇನ್ನೊಬ್ಬರು ₹2.5 ಲಕ್ಷಗಳಷ್ಟು ಮೊತ್ತವನ್ನು ಮುಂಗಡವಾಗಿ ಪಡೆದುಕೊಂಡಿದ್ದಾರೆ .
ಹಣವನ್ನು ಪಡೆದ ನಂತರ ಆರೋಪಿಗಳು ಕಾಳುಮೆಣಸು ಪೂರೈಸದೆ, ಹಣವನ್ನು ಹಿಂದಿರುಗಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಮಾಲೀಕರು ದೂರಿನಲ್ಲಿ ತಿಳಿಸಿದ್ದಾರೆ .
ಈ ಸಂಬಂಧ ಅವರು ತೀರ್ಥಹಳ್ಳಿ ಪೊಲೀಸರಿಗೆ ದೂರು ಸಲ್ಲಿಸಿದ್ದಾಗಿ ತಿಳಿದುಬಂದಿದ್ದು, ಪೊಲೀಸರು ಈಗಾಗಲೇ ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…