Headlines

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ – ಸಾವಿನ ಸುತ್ತ ಅನುಮಾನಗಳ ಹುತ್ತ..!??

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಚಂಗಾರು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.

ಕೃಷಿ ಕಾರ್ಯಕ್ಕಾಗಿ ಜುಲೈ 26 ರಂದು ಮಧ್ಯಾಹ್ನ 2 ಗಂಟೆಗೆ ಮನೆಪಕ್ಕದ ತೋಟಕ್ಕೆ ತೆರಳಿದ್ದ ರಮೇಶ್ ಎಂಬವರು ಆ ದಿನದಿಂದ ನಾಪತ್ತೆಯಾಗಿದ್ದರು. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು.

ಇಂದು ಬೆಳಿಗ್ಗೆ (ಜು. 29) ರಮೇಶ್ ಅವರ ಶವ ಹಂಗಾರು ಗ್ರಾಮದಲ್ಲಿ, ಕಲ್ಲುಗುಡ್ಡದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಶವ ಪತ್ತೆಯಾಗಿರುವ ಸ್ಥಳ ಹಾಗೂ ತೋಟವಿರುವ ಪ್ರದೇಶಗಳು ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಇರುವುದು ಈ ಪ್ರಕರಣವನ್ನು ಇನ್ನಷ್ಟು ಕುತೂಹಲಕಾರಿ ಮೂಡಿಸಿದೆ.

ಘಟನೆ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಸ್ಥರು ಹಾಗೂ ಕುಟುಂಬದವರು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಗ್ರಾಮಸ್ಥರ ಪ್ರಕಾರ, ಬಡ್ಡಿ ವ್ಯವಹಾರದ ಹಿನ್ನೆಲೆಯಲ್ಲಿ ರಮೇಶ್ ಅವರ ಸಾವಿನ ಹಿನ್ನಲೆ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ.