ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ
ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ.
ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ.
ಪ್ರಕರಣವೊಂದರಲ್ಲಿ ದೌಲತ್ ಅಲಿಯಾಸ್ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್ರೇ ಮಾಡಿದಾಗ ಖೈದಿ ದೌಲತ್ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿಷೇಧವಿದ್ದರು ಜೈಲಿನೊಳಗೆ ಮೊಬೈಲ್ ಫೋನ್ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್.ಪಿ ಅವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಖೈದಿಯ ಹೊಟ್ಟೆ ಶಸ್ತ್ರಚಿಕಿತ್ಸೆ ಮಾಡದಿದ್ದರೆ ಸಾವನ್ನಪ್ಪುತಿದ್ದ
ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ.ಈತ ಜೂನ್ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್ರೇ ಮಾಡಿದಾಗ ಖೈದಿ ದೌಲತ್ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಆತನ ಹೊಟ್ಟೆಯನ್ನ ಬಗೆದು ಮೊಬೈಲ್ ನ್ನ ಹೊರತೆಗೆಯಲಾಗಿದೆ. ಜೂನ್ 24 ರಂದು ಆತ ಮೊಬೈಲ್ ನುಗಿದ್ದ, ಜೂನ್ 27 ಕ್ಕೆ ಆತನ ಹೊಟ್ಟೆ ಆಪರೇಷನ್ ಮಾಡಿ ಮೊಬೈಲ್ ತೆಗೆಯಲಾಗಿತ್ತು. ಈಗ ಆತ ಮೆಗ್ಗಾನ್ ನಿಂದ ಹುಷಾರಾಗಿ ಹೊಗಿದ್ದಾನೆ. ಮೂರು ದಿನ ಆತನ ಹೊಟ್ಟೆಯಲ್ಲಿದ್ದ ಮೊಬೈಲ್ ಲೀಥಿಯಮ್ ಬ್ಯಾಟರಿ ಒಂದು ವೇಳೆ ಸೋರಿಕೆಯಾಗಿದ್ದರೆ ಆತ ಸಾಯುತ್ತಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…