ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ

ರಿಪ್ಪನ್‌ಪೇಟೆ: “ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯವು ರಾಜಕೀಯದ ಆಟಕ್ಕೆ ಬಲಿಯಾಗಬಾರದು. ಇದು ಸಾವಿರಾರು ಭಕ್ತರ ನಂಬಿಕೆಗೆ ತಾಯಿಯಾಗಿರುವ ದೇಗುಲ. ಇಂತಹ ಪವಿತ್ರ ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ,” ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಆರೋಪಿಸಿದ್ದಾರೆ.

ಬುಧವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕರಾಗಿ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಗೆ ಸರಕಾರದಿಂದ ನೀರಾವರಿ ನಿಗಮದ ಮೂಲಕ ₹1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಅನುದಾನವನ್ನು ನಿರ್ಮಿತಿ ಕೇಂದ್ರದ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಮೀಸಲಿರಿಸಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು.

ಆದರೆ ಈಗಿನ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಈ ಅನುದಾನವನ್ನು ತಡೆಯುವ ನಿಟ್ಟಿನಲ್ಲಿ ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಸರ್ಕಾರದ ಅನುದಾನವನ್ನೇ ವಾಪಸ್ ಕಳುಹಿಸಿರುವುದು ಭಕ್ತರ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಸುಬ್ರಹ್ಮಣ್ಯ ಆಕ್ರೋಶ ವ್ಯಕ್ತಪಡಿಸಿದರು.

“ಶಾಸಕರಾಗಿ ಗೋಪಾಲಕೃಷ್ಣ ಅವರು ಎರಡೂವರೆ ವರ್ಷಗಳಿಂದ ಅಧಿಕಾರದಲ್ಲಿದ್ದಾರೆ. ಈ ಅವಧಿಯಲ್ಲಿ ಅವರು ದೇವಾಲಯ ಅಭಿವೃದ್ಧಿಗೆ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಜನರ ಮುಂದೆ ಬಹಿರಂಗಪಡಿಸಲು ಸಿದ್ಧರಾಗಲಿ. ನಾವು ಚರ್ಚೆಗೆ ಸಿದ್ಧವಾಗಿದ್ದೇವೆ,” ಎಂದು ಅವರು ಸವಾಲು ಹಾಕಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮುಖಂಡ ಆರ್.ಟಿ. ಗೋಪಾಲ ಮಾತನಾಡಿ ಹಿಂದಿನ ವ್ಯವಸ್ಥಾಪನಾ ಸಮಿತಿಯಲ್ಲಿ”ಇಪ್ಪತ್ತು ವರ್ಷಗಳ ಕಾಲ ಅಧ್ಯಕ್ಷರಾಗಿದ್ದ ಕಲಗೋಡ್ ರತ್ನಾಕರ್ ಅವರು ಅಧಿಕಾರ ಮುಗಿದ ಬಳಿಕವೂ ಹೊಸ ಸಮಿತಿಗೆ ಅಧಿಕಾರ ಹಸ್ತಾಂತರ ಮಾಡಿಲ್ಲ. ಇಷ್ಟಲ್ಲದೇ ಸಾರ್ವಜನಿಕರಿಂದ ಸಂಗ್ರಹಿಸಿದ ಲಕ್ಷಾಂತರ ರೂಪಾಯಿ ವಂತಿಕೆ ಹಣವನ್ನು ಮೂರು ವರ್ಷಗಳಿಂದ ತಮ್ಮ ಸ್ವಂತ ಹಣದಂತೆ ಇಟ್ಟುಕೊಂಡಿರುವುದು ನ್ಯಾಯವೇ?” ಎಂದು ಪ್ರಶ್ನಿಸಿದರು.

ಅವರು ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಎಲ್ಲಿ ಕೈ ತಪ್ಪುತದೆಯೋ ಎಂಬ ಭಯದಲ್ಲಿ ಶಾಸಕರ ಅಣತಿಯಂತೆ ಈ ರೀತಿ ಹೇಳಿಕೆ ನೀಡುತ್ತಿರುವ ಸಾಧ್ಯತೆ ಇದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್. ಸತೀಶ್, ಪ್ರಧಾನ ಕಾರ್ಯದರ್ಶಿ ನಾಗಾರ್ಜುನಸ್ವಾಮಿ, ಬಿಜೆಪಿ ಮಹಿಳಾ ಉಪಾಧ್ಯಕ್ಷೆ ಎ.ಟಿ. ನಾಗರತ್ನಮ್ಮ,ಪ್ರಮುಖರಾದ ಆನಂದ್ ಮೆಣಸೆ ,ಸುಧೀಂದ್ರ ಪೂಜಾರಿ, ಸುಂದರೇಶ್ ಕೆರೆಹಳ್ಳಿ ,ಮಂಜುಳಾ ಕೆ ರಾವ್ , ಪದ್ಮಾ ಸುರೇಶ್ , ನಾಗರತ್ನ ದೇವರಾಜ್ , ಅಶ್ವಿನಿ ರವಿಶಂಕರ್ , ಮುರುಳಿ ಕೆರೆಹಳ್ಳಿ ,ಮಲ್ಲಿಕಾರ್ಜುನ್ , ಲೀಲಾ ಶಂಕರ್ , ದೀಪಾ ಸುಧೀರ್ ,ಶಾಜಿ ಪಕ್ಷದ ಹಲವು ಮುಖಂಡರು ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 hour ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 hour ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 hour ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

2 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

10 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago