28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ 

ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು

{“remix_data”:[],”remix_entry_point”:”challenges”,”source_tags”:[“local”],”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{“border”:1},”is_sticker”:false,”edited_since_last_sticker_save”:true,”containsFTESticker”:false}

ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ ಮಾಡಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಸುಬೇದಾರ್ ಕೃಷ್ಣಮೂರ್ತಿ ಎನ್.ಬಿ. ಇವರಿಗೆ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಅದ್ಧೂರಿಯಾಗಿ ಗ್ರಾಮಸ್ಥರು, ಅಭಿಮಾನಿಗಳು ಸ್ವಾಗತಿಸಿ ಶುಭ ಹಾರೈಸಿದರು.

ಸಿದ್ದಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಯೋಧ ಕೃಷ್ಣಮೂರ್ತಿ ಎನ್.ಬಿ. ಇವರನ್ನು ರಿಪ್ಪನ್ ಪೇಟೆ ವಿನಾಯಕ ವೃತ್ತದ ಮಾರ್ಗವಾಗಿ ಮೆರವಣಿಗೆಯಲ್ಲಿ ಕರೆತರಲಾಯಿತು ಈ ಸಂಧರ್ಭದಲ್ಲಿ ವಿವಿಧ ಸಂಘ ಸಂಸ್ಥೆಯವರು  ನಿವೃತ್ತ ಯೋಧ ಸುಬೇದಾರ್ ಕೃಷ್ಣ ಮೂರ್ತಿ ರವರಿಗೆ ಗೌರವಿಸಿ ಸನ್ಮಾನಿಸಿದರು.

ಮಾರ್ಗ ಮಧ್ಯದಲ್ಲಿ ಅನೇಕ ಯುವಕರು ಯೋಧನಿಗೆ ಹೂಮಾಲೆ ಹಾಕಿ ಅವರಿಗೆ ಗೌರವದ ವಂದನೆ ಸಲ್ಲಿಸುತ್ತಿದ್ದರು. ಇನ್ನು ಅನೇಕ ಮಹಿಳೆಯರು ತಮ್ಮ ಪುಟ್ಟ ಪುಟ್ಟ ಮಕ್ಕಳನ್ನು ಯೋಧನ ಕೈಗೆ ಕೊಟ್ಟು ಹರ್ಷ ಪಡುತ್ತಿದ್ದರು. ನಂತರ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಭವ್ಯ ಸ್ವಾಗತ ಮಾಡುವುದರೊಂದಿಗೆ ನಿವೃತ್ತಿ ಜೀವನಕ್ಕೆ ಶುಭಕೋರಿದರು.

ವಿನಾಯಕ ವೃತ್ತದಲ್ಲಿ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ನಿವೃತ್ತ ಯೋಧ ಕೃಷ್ಣಮೂರ್ತಿಯವರನ್ನು ಸ್ವಾಗತಿಸಿ ಅಭಿನಂದಿಸಿ ನಿಮ್ಮ ನಿವೃತ್ತಿ ಜೀವನ ಸುಖಮಯವಾಗಲೆಂದು ಹಾರೈಸಿ ಅಭಿನಂದಿಸಿದರು.

ಬಳಿಕ ಮಾತನಾಡಿದ ನಿವೃತ್ತ ಸೈನಿಕ ಸುಬೇದಾರ್ ಕೃಷ್ಣಮೂರ್ತಿ ಹೆತ್ತ ತಾಯಿ ಹಾಗೂ ಜನ್ಮ ಪಡೆದ ದೇಶದ ಋಣವನ್ನು ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಬರೀ ಅವರ ಸೇವೆಯನ್ನಷ್ಟೆ ನಾವು ಮಾಡಬಹುದು. ನಾನು ಕಳೆದ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದೇನೆ. ಇವತ್ತು ಗ್ರಾಮಸ್ಥರು ನೀಡಿದ ಸ್ವಾಗತ ಹೃದಯ ತುಂಬಿದೆ. ಇದಕ್ಕೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆ. ಇಷ್ಟು ವರ್ಷ ಗಡಿಯಲ್ಲಿ ದೇಶ ಸೇವೆ ಮಾಡಿದ್ದೇನೆ. ಈಗ ಊರಲ್ಲಿ ಜಮೀನಿನಲ್ಲಿ ಕೃಷಿಕನಾಗಿ ಕೆಲಸ ಮಾಡುತ್ತೇನೆ. ಗಡಿ ಸೇವೆಯ ಬಳಿಕ ಭೂತಾಯಿ ಸೇವೆಗೆ ಅಣಿಯಾಗಲಿದ್ದೇನೆ ಎಂದರು.

ನಂತರದಲ್ಲಿ ಮೆರವಣಿಗೆ ಮೂಲಕ ಸ್ವಗ್ರಾಮ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಾಮನಗದ್ದೆ ಗ್ರಾಮಕ್ಕೆ ಕರೆದೊಯ್ಯಲಾಯಿತು.

ಈ ಸಂದರ್ಭದಲ್ಲಿ ಬಿಎಸ್ ಎನ್ ಡಿಪಿ ರಾಜ್ಯ ಕಾರ್ಯದರ್ಶಿ ಲೇಖನಾ ಚಂದ್ರನಾಯ್ಕ್ , ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಜಿಲ್ಲಾ ಘಟಕದ ಆಧ್ಯಕ್ಷ ನಾಗೇಶ್, ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ, ಸುಶೀಲ ಮೂಡಾಗ್ರೆ, ಸೀತ ರಾಜಪ್ಪ, ಇನ್ನಿತರರು ಪಾಲ್ಗೊಂಡಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

37 minutes ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

51 minutes ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

8 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

12 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

12 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

24 hours ago