ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ

ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು.

ಪಟ್ಟಣದ ರೋಟರಿಕ್ಲಬ್‌ನ ಸಭಾಂಗಣದಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಡಿಸ್ಟಿçಕ್ಟ್ ಗವರ್ನರ್ರೊ.ಬಿ.ಎಂ.ಭಟ್ ಪ್ರದವಿ ಪ್ರಧಾನ ಮಾಡಲಿದ್ದಾರೆ.ಈ ಸಮಾರಂಭದಲ್ಲಿ ರೋಟರಿ ಜಿಲ್ಲಾ 3182 ರ   ಅಸಿಸ್ಟೆಂಟ್ ಗವರ್ನರ್ ವಲಯ-೧೧ .ಎಂ.ಬಿ. ಲಕ್ಷ್ಮಣಗೌಡ,ವಲಯ-೧೧ರ ಝೋನಲ್ ,ಲೆಪ್ಟಿನೆಂಟ್ರೊ.ಭರತ್‌ಕುಮಾರ್ ಕೋಡ್ಲು ಉಪಸ್ಥಿತಿಯಲ್ಲಿ ಜರುಗಲಿದೆ.

ರೋಟರಿಕ್ಲಬ್  ಹಾಲಿ ಅಧ್ಯಕ್ಷ ಎಂ.ರಾಮಚಂದ್ರ,ಕಾರ್ಯದರ್ಶಿ ರೊ.ಸಬಾಸ್ಟಿನ್ ಮ್ಯಾಥ್ಯೂಸ್ ಹಾಗೂ ೨೦೨೫-೨೬ ನೇ ಸಾಲಿನ ರೋಟರಿಕ್ಲಬ್ಅಧ್ಯಕ್ಷರೊ.ಎ.ಎಂ.ಕೃಷ್ಣರಾಜ್ ಕಾರ್ಯದರ್ಶಿ ರವೀಂದ್ರಬಲ್ಲಾಳ್ ಕೆ.ಇವರಿಗೆ ಪದವಿ ಹಸ್ತಾಂತರ ಮಾಡಲಿದ್ದಾರೆ  ಎಂದು ತಿಳಿದರು.

ಇದೇ ಸಂದರ್ಭದಲ್ಲಿ ೨೦೨೪-೨೫ ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿಯಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕಗಳಿಸುವ ಮೂಲಕ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿವಿಧಕ್ಷೇತ್ರದಲ್ಲಿ ಸಾಧನೆಗೈದವರಿಗೆ ಪುರಸ್ಕಾರ ನೀಡಿಗೌರವಿಸಲಾಗುವುದುಎಂದು ತಿಳಿಸಿದರು.

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರೋಟರಿ ಜಿಲ್ಲಾ 31 82 ವಲಯ11ರ ಅಸಿಸ್ಟೆಂಟ್ ಗವರ್ನರ್ ಎಂ.ಬಿ ಲಕ್ಷ್ಮಣಗೌಡ ಮಾತನಾಡಿ  ಆರೋಗ್ಯ ಶಿಕ್ಷಣ ಸಮಾಜ ಸೇವೆ ಮತ್ತು ಆತಿಥ್ಯದ ಸಲುವಾಗಿ ಸ್ಥಾಪಿಸಲು ಪಟ್ಟ ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ರಿಪ್ಪನ್ ಪೇಟೆಯಲ್ಲಿ ಪ್ರಾರಂಭವಾಗಿ ಇದೀಗ 15 ವರ್ಷಗಳಾಯಿತು, ಆರೋಗ್ಯ ಶಿಕ್ಷಣ, ಕೃಷಿ, ಮತ್ತು ಪಶು ಸಂಗೋಪನೆ  ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ನೂರಾರು ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜ ಸೇವೆಯನ್ನು ಮಾಡುವ ಸದುದ್ದೇಶವನ್ನು ಹೊಂದಿರುವ ನಾಗರಿಕರಿಗೆ ರೋಟರಿ ಸಂಸ್ಥೆಯು ಅತ್ಯುತ್ತಮವಾದ ವೇದಿಕೆಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ,ಜೆ.ರಾಧಾಕೃಷ್ಣ, ಕಾರ್ಯದರ್ಶಿ ರವೀಂದ್ರಬಲ್ಲಾಳ್, ಎನ್.ಗಣೇಶಕಾಮತ್,ಹೆಚ್. ಎ. ರಾಧಾಕೃಷ್ಣ, ಸಬಾಸ್ಟಿನ್ ಮ್ಯಾಥ್ಯೂಸ್, ಡಾಕಪ್ಪ ಮುಡುಬ,ಶಿವಕುಮಾರಶೆಟ್ಟಿ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

2 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

8 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago