ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ.
ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ ಸವಾರರು ವಾಹನ ಚಲಿಸಲು ಭಯಭೀತರಾಗಿದ್ದಾರೆ.
ಆಯನೂರು – ಮಾಳೂರು ಮುಖ್ಯ ರಸ್ತೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ವೇಳೆ ರಸ್ತೆ ಬದಿಯಲ್ಲಿ ದೊಡ್ಡದಾದ ಟ್ರೆಂಚ್ ಗಳನ್ನು ಹೊಡೆದಿದ್ದು ಜುಲೈ 22 ರ ಸಂಜೆ 6 ಗಂಟೆಯ ಹೊತ್ತಿಗೆ ರಸ್ತೆ ಕುಸಿದಿದ್ದು. ಹಣಗೆರೆ ಗ್ರಾಮ ಪಂಚಾಯತಿ ಸಿಬ್ಬಂದಿ ಮಣಿಕಂಠ ಎಸ್ ಡಿ ತಕ್ಷಣ ಪಿ ಡಿ ಓ ಅಧಿಕಾರಿ & ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಕರೆ ಮಾಡಿ ತಿಳಿಸಿ ತಕ್ಷಣ ಬ್ಯಾರಿಕೆಡ್ ಹಾಕಲಾಯಿತು.
ಈ ಬಗ್ಗೆ ಮೌನ ವಹಿಸಿರುವ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ತೀರ್ಥ ಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರರಿಗೆ ಸ್ಥಳೀಯರು ಅಕ್ರೋಶ ಹೊರ ಹಾಕಿದ್ದಾರೆ. ತಕ್ಷಣ ಸ್ಪಂದಿಸಿ ರಸ್ತೆ ಸರಿ ಪಡಿಸಲು ಮನವಿ ಮಾಡಿದ್ದಾರೆ.
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…
ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…