ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು

ರಿಪ್ಪನ್ ಪೇಟೆಯಲ್ಲಿ SSF ವತಿಯಿಂದ ಸೌಹಾರ್ದ ನಡಿಗೆ

ರಿಪ್ಪನ್ ಪೇಟೆ : ಮುಸಲ್ಮಾನರ ನಿಷ್ಟೆ , ಕ್ರೈಸ್ತರ ಕರುಣೆ , ಹಿಂದೂಗಳ ಭಾವೈಕ್ಯತಯಿಂದ ಸಮಾಜದಲ್ಲಿ ನಿಜವಾದ ಸೌಹಾರ್ದತೆಯ ಭಾವನೆ ಬೆಳಸಲು ಸಾಧ್ಯ ಎಂದು ಮಳಲಿ ಮಠದ ಪೀಠಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.

ಪಟ್ಟಣದ ವಿನಾಯಕ ವೃತ್ತದಲ್ಲಿ SSF ರಾಜ್ಯ ಘಟಕದ ವತಿಯಿಂದ ಆಯೋಜಿಸಲಾದ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು  ಸಿದ್ದಾಂತ ಶಿಖಾಮಣಿಯ ಧರ್ಮಗ್ರಂಥದ  ಸಾರವು  ಸರ್ವಧರ್ಮದ ಪರಿಪಾಲನೆಯಿಂದ ಸಮಾಜದಲ್ಲಿ ಸಾಮರಸ್ಯ  ಬೆಳಸಲು ಸಾಧ್ಯವಿದೆ ,ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಮಾತ್ರ ಮಾನವೀಯತೆಗೆ ಅರ್ಥ ಬರುತ್ತದೆ. ಹೀಗಾದರೆ ಮಾತ್ರ ಸಮಾಜದಲ್ಲಿ ಸೌಹಾರ್ದತೆ ಸಾಧ್ಯ ಎಂದರು.

ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ರಾಷ್ಟ್ರದ ಸೇವೆಯನ್ನು ಮಾಡುವುದು ನಮ್ಮೆಲ್ಲರ  ಮೂಲಭೂತ ಕರ್ತವ್ಯ ಮತ್ತು ಉದ್ದೇಶವಾಗಿರಬೇಕು. ಈ ಜಗತ್ತಿನ ಮಾನವ ಜೀವಿಗಳೆಲ್ಲರೂ  ಸಹೋದರ ಸಹೋದರಿ ಎನ್ನುವ ಭ್ರಾತೃತ್ವ  ಭಾವನೆಯಿಂದ ಇದ್ದಾಗ ಮಾತ್ರ ನಾವು ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು ಎಂದರು.

ಮುಖ್ಯ ಅತಿಥಿ ತೀರ್ಥಹಳ್ಳಿಯ ಕ್ರೈಸ್ತ ಧರ್ಮಗುರುಗಳಾದ ವೀರೇಶ್ ಮೊರಸ್ ಮಾತನಾಡಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಎಂಬ ಬೇದಭಾವನೆ ಮಾಡದೆ ನಾವುಗಳಲ್ಲರೂ ಒಂದೇ , ಎಲ್ಲ ಧರ್ಮದ ಸಾರವೂ ಒಂದೆಯಾಗಿದೆ.ಎಲ್ಲ ಉಪನದಿಗಳು ಸಮುದ್ರವನ್ನು ಸೇರುತ್ತವೆ ಹಾಗೆ ಎಲ್ಲಾ ಧರ್ಮದವರು ಕೊನೆಯಲ್ಲಿ  ಸೇರುವುದು  ಸ್ಮಶಾನಕ್ಕೆಎಂದು ಹೇಳಿದರು.

ಧಾರ್ಮಿಕ ಗುರುಗಳಾದವರು ಧರ್ಮಭೋದನೆ ಮಾಡುವ ಮೂಲಕ ಸಮಾಜದ ಸಂಘಟನೆ ಮಾಡಬೇಕು, ಅದರೆ ಧರ್ಮಭೋದನೆ ಬಿಟ್ಟುರಾಜಕೀಯ ನಾಯಕರು  ಬೆಂಬಲಕ್ಕೆ ನಿಂತಿದ್ದಾರೆ,ಇದು ಮುಂದಿನ ದಿನಗಳಲ್ಲಿ ಇದು ಸಮಾಜದಲ್ಲಿ ಸಾಮರಸ್ಯಕ್ಕೆ ಅಪಾಯಕಾರಿಯಾಗಲಿದೆ ಎಂದರು.

SSF ಘಟಕದ ರಾಜ್ಯ ಅಧ್ಯಕ್ಷ ಸೂಫಿಯನ್ ಸಖಾಪಿ ಮಾತನಾಡಿ ಮನುಷ್ಯ ಮನುಷ್ಯನನ್ನು ಪ್ರೀತಿಸುವುದನ್ನು ಎಲ್ಲಿಯವರೆಗೆ ಮೈಗೂಡಿಸಿ ಕೊಳ್ಳುವುದಿಲ್ಲವೋ ಅಲ್ಲಿಯವರೆಗೂ ಸಮಾಜದಲ್ಲಿ ಜನಾಂಗೀಯ ತಾರತಮ್ಯ ಜೀವಂತವಾಗಿರುತ್ತದೆ. ಇದನ್ನು ತೊಲಗಿಸಲು ಜನರನ್ನು ಪರಸ್ಪರ ಪ್ರೀತಿಸುವುದೇ ಏಕೈಕ ಮಾರ್ಗ , ಮಾನವನ ಮಧ್ಯೆ ಪರಸ್ಪರ ಅನ್ಯೋನ್ಯತೆ ಬೆಳೆಯಲು ನಂಬಿಕೆ ಮುಖ್ಯ. ನಂಬಿಕೆಯನ್ನು ಕಾಪಾಡಿ ಕೊಂಡರೆ ಸಾಮಾಜಿಕ ಬದುಕಿನಲ್ಲಿ ಸೌಹಾರ್ದತೆ ಸಾಧ್ಯವಿದೆ ಎಂದರು. ಅನೈತಿಕತೆಗೆ ಇಸ್ಲಾಂ ಧರ್ಮದಲ್ಲಿ ಎಂದೂ ಜಾಗವಿಲ್ಲ.ಇದು ಗೊತ್ತಿದ್ದೂ ಇದನ್ನು ಉಲ್ಲಂಘಿಸುತ್ತಿರುವವರು ಇಸ್ಲಾಂ ಧರ್ಮಾನುಯಾಯಿಗಳಾಗಲು ಸಾಧ್ಯವಿಲ್ಲ. ಈ ಬಗ್ಗೆ ಇಸ್ಲಾಂ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ SSF ಘಟಕದ ವತಿಯಿಂದ ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಧರ್ಮಗುರುಗಳು , ಮಳಲಿ ಶ್ರೀಗಳು ಹಾಗೂ ಕ್ರೈಸ್ತ ಧರ್ಮಗುರುಗಳ ನೇತ್ರತ್ವದಲ್ಲಿ ಸೌಹಾರ್ಧ ನಡಿಗೆ ಮೂಲಕ ಭಾವೈಕ್ಯತೆಯನ್ನು ಸಾರಲಾಯಿತು.

ಈ ಸಂಧರ್ಭದಲ್ಲಿ ಮೊಹಿಯುದ್ದೀನ್ ಜುಮ್ಮಾಮಸೀಧಿ ಧರ್ಮಗುರುಗಳಾದ ಮುನೀರ್ ಸಖಾಫಿ, ಮಸೀದಿ ಅಧ್ಯಕ್ಷರಾದ ಹಸನಬ್ಬ ಬ್ಯಾರಿ ,ಮುಸ್ಲಿಂ ಮುಖಂಡರಾದ ಆರ್.ಎ.ಚಾಬುಸಾಬ್, ಆರ್.ಎ.ಆಮ್ಮೀರ್‌ಹಂಜಾ,ಆಸೀಪ್ ಭಾಷಾ ,ಸ್ಥಳೀಯ ಮುಖಂಡರಾದ ಧನಲಕ್ಷ್ಮಿ, ಟಿ.ಆರ್.ಕೃಷ್ಣಪ್ಪ, ಆರ್.ಎನ್.ಮಂಜುನಾಥ, ನಿರೂಫ್ಕುಮಾರ್ ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

14 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

18 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

18 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

2 days ago