ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸಾರ್ವಜನಿಕರಿಗೆ ಸಮರ್ಪಕವಾಗಿ ಸ್ಪಂದಿಸುತಿದ್ದು ಯಾವುದೇ ರೀತಿಯಲ್ಲಿಯೂ ತೊಂದರೆಯಾಗುತ್ತಿಲ್ಲ ಬಿಜೆಪಿ ಪಕ್ಷದ ಮುಖಂಡರು ಶಾಸಕ ಬೇಳೂರು ಗೋಪಾಲಕೃಷ್ಣ ರವರ ಕಾರ್ಯ ವೈಖರಿಯನ್ನು ಸಹಿಸದೇ ಆಸ್ಪತ್ರೆಯ ಬಗ್ಗೆ ನಿರಾಧಾರ ಆರೋಪ ಮಾಡುತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಹೇಳಿದರು.

ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದವರು ಪಟ್ಟಣದ ಆಸ್ಪತ್ರೆಯಲ್ಲಿ ಸರಿಯಾದ ಮೂಲ ಸೌಕರ್ಯಗಳಿಲ್ಲದೇ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರಕದೇ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪ್ರತಿಭಟನೆ ಮಾಡಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದ್ದು ವಿರೋದ  ಪಕ್ಷದವರು ದುರುದ್ದೇಶದಿಂದ ತಪ್ಪಾಗಿ ಹೇಳಿಕೆ ನೀಡಿ ಶಾಸಕರ ಕಾರ್ಯ ವೈಖರಿಯನ್ನು ಸಹಿಸದೇ ಈ ರೀತಿಯ  ಪ್ರತಿಭಟನೆ ನಡೆಸಿದ್ದಾರೆ ಎಂದರು.

ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸಾಕಷ್ಟು ಭಾರಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ , ಇದಕ್ಕೆ ಅವರಿಂದ ಸಹಮತವು ವ್ಯಕ್ತವಾಗಿದ್ದೂ ಮುಂದಿನ ಬಾರಿ ಘೋಷಣೆಯಾಗುವ ಸಮುದಾಯ ಆಸ್ಪತ್ರೆಯ ಪಟ್ಟಿಯಲ್ಲಿ ಪಟ್ಟಣಕ್ಕೆ ಮೊದಲ ಆದ್ಯತೆ ಎಂಬ ಭರವಸೆಯೂ ನೀಡಿದ್ದಾರೆ, ಅಸ್ಪತ್ರೆಯ ಅರೋಗ್ಯ ಸಮಿತಿಯ ಸದಸ್ಯರು ಅಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಅಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುತ್ತಿದ್ದು ಈಗಾಗಲೇ ಪ್ರೀಜ್ ಮತ್ತುಜನರೇಟರ್ ಹಾಗೂ ವಾಸಿಂಗ್ ಮಿಷನ್ ಹೀಗೆ ಹತ್ತು ಹಲವು ಮೂಲಭೂತ ಸೌಲಭ್ಯಗಳನ್ನು ಅಸ್ಪತ್ರೆಗೆ ಒದಗಿಸಲಾಗಿದೆ ಎಂದರು.

ಹೊಸನಗರ ತಾಲೂಕ್ ಕೆಡಿಪಿ ಸದಸ್ಯ ಆಸೀಫ಼್ ಭಾಷಾ ಮಾತನಾಡಿ ಬಿಜೆಪಿ ಪಕ್ಷದ ಮುಖಂಡರಿಗೆ ಅಸ್ಪತ್ರೆಯ ಬಗ್ಗೆ ಮಾತನಾಡಲು ನೈತಿಕತೆಯೆ ಇಲ್ಲ ,ಈ ಹಿಂದೆ ಐದು ವರ್ಷಗಳ ಕಾಲ ಅಧಿಕಾರ ಮಾಡಿದ ಶಾಸಕ ಹರತಾಳು ಹಾಲಪ್ಪನವರು ಅಸ್ಪತ್ರೆಗೆ ಒಮ್ಮೆಯೂ ಭೇಟಿ ನೀಡದೆ ಆಸ್ಪತ್ರೆಯ ಸ್ಥಿತಿ ಹದಗೆಟ್ಟಿ ಹೋಗಿತ್ತು , ಆಸ್ಪತ್ರೆಯ ಒಳ ಹೋಗಲು ಹೆಲ್ಮೇಟ್ ಧರಿಸಿ ಹೀಗುವ ಪರಿಸ್ಥಿತಿ ಉಂಟಾಗಿತ್ತು ಈ ಬಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ನಾವುಗಳು ಪ್ರತಿಭಟನೆಯನ್ನು ನಡೆಸಿದ್ದೇವು ಆದರೂ ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ಶಾಸಕರು ತಲೆಕೆಡಿಸಿಕೊಂಡಿರಲಿಲ್ಲ ನಮ್ಮ ಶಾಸಕರು ಆಯ್ಕೆಯಾಗಿ ಕೇವಲ ಒಂದು ತಿಂಗಳೊಳಗೆ ಸುಮಾರು 12 ಲಕ್ಷ ರೂ ವೆಚ್ಚದಲ್ಲಿ ಮೇಲ್ಚಾವಣಿ ಹಾಕಿಸಿದ್ದಾರೆ , ಇನ್ನೂ ಕಳೆದ ಬಾರಿ ರಿಪ್ಪನ್ ಪೇಟೆಗೆ ಭಾಗಕ್ಕೆ ಅತಿ ಅಗತ್ಯವಿದ್ದ ಸಮುದಾಯ ಆಸ್ಪತ್ರೆಯನ್ನು ಆರಗ ಜ್ಞಾನೇಂದ್ರ ಕೋಣಂದೂರು ಗ್ರಾಮಕ್ಕೆ ಸ್ಥಳಾಂತರ ಮಾಡಿದಾಗ ಈಗ ಪ್ರತಿಭಟನೆ ಮಾಡಿದವರು ಚಕಾರವೆತ್ತಲಿಲ್ಲ ಈಗ ಶಾಸಕರ ಉತ್ತಮ ಕಾರ್ಯ ವೈಖರಿಯನ್ನು ಸಹಿಸದೇ ಹತಾಶರಾಗಿ ಈ ರೀತಿಯ ಹೇಳಿಕೆ ನೀಡುತ್ತಾರೆ ಎಂದರು‌.

ಪತ್ರಿಕಾ ಗೋಷ್ಠಿಯಲ್ಲಿ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಅಧ್ಯಕ್ಷ ಗಣಪತಿ ಗವಟೂರು,ಕೆಡಿಪಿ ಸದಸ್ಯ ಎನ್.ಚಂದ್ರೇಶ್,ಗ್ರಾಪಂ ಸದಸ್ಯ ಡಿ.ಈ.ಮಧುಸೂದನ,ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್,ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶ್ರೀಧರ್ ಚಿಗುರು , ಪ್ರಕಾಶ ಪಾಲೇಕರ್, ಸಾರಾಬಿ, ನವೀನ ಕೆರೆಹಳ್ಳಿ ಇನ್ನಿತರರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

2 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

4 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

4 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

1 day ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

1 day ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

1 day ago