ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ.

ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ ಮೂಲಕವೇ 5.70 ಲಕ್ಷ ರೂಪಾಯಿ ಹಣವನ್ನು ಕಿತ್ತುಕೊಂಡಿರುವ ಘಟನೆ ಇತ್ತೀಚೆಗೆ ನಡೆದಿದ್ದು, ಆತಂಕಕಾರಿ ವಿಚಾರವಾಗಿದೆ.

ಆ ವ್ಯಕ್ತಿಯ ಮೊಬೈಲ್‌ಗೆ HDFC ಬ್ಯಾಂಕ್‌ನ ಹೆಸರಿನಲ್ಲಿ ಎರಡು ಮೆಸೇಜ್‌ಗಳು ಬಂದವು. ಶಂಕೆಯಿಲ್ಲದೆ ಅವುಗಳನ್ನು ಓಪನ್ ಮಾಡಿದಾಗ, ಅವರ ಖಾತೆಯಿಂದ ಲಕ್ಷಾಂತರ ರೂಪಾಯಿ ನಗದು ಡೆಬಿಟ್ ಆಗಿರುವುದನ್ನು ನೋಡಿ ಅವರು ಶಾಕ್ ಆಗಿದ್ದಾರೆ.

ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ.

ಹಣ ಹಂಚಿಕೆ ಅಥವಾ ಪೇಮೆಂಟ್ ಕುರಿತು ಯಾರೊಂದಿಗೆ ಕೂಡ ಚಟುವಟಿಕೆ ನಡೆದಿಲ್ಲ. ಯಾರೋ ಅವರ ಖಾತೆಯ ನಿಯಂತ್ರಣ ಪಡೆದು, OTP ಕಳುಹಿಸದೆ ಹಣವನ್ನು ಹಂತ ಹಂತವಾಗಿ ಬೇರೊಂದು ಖಾತೆಗೆ ವರ್ಗಾಯಿಸಿರುವುದಾಗಿ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಈ ಸಂಬಂಧ ಶಿವಮೊಗ್ಗದ ಸಿಐಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

16 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

16 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

17 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

24 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

1 day ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

1 day ago