ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ
ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ.
ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು.
ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಶಿವಮೊಗ್ಗ-ಎ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಭದ್ರಾವತಿ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಭದ್ರಾವತಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಸಾಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಸಾಗರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ಮತ್ತು ಸೊರಬ ಹಾಗೂ ಶಿಕಾರಿಪುರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಶಿಕಾರಿಪುರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ತಮ್ಮ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದಾಗಿದೆ.
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…