ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು
ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ಜಂಬರಘಟ್ಟದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಹಳೆ ಜಂಬರಘಟ್ಟ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಶಾಂತಮ್ಮ ಎಂಬ ಮಹಿಳೆ ಗೀತಾಳ ಮೈ ಮೇಲೆ ‘ದೆವ್ವ ಬರುತ್ತದೆ. ಅವಳಿಗೆ ದೆವ್ವ ಹಿಡಿದಿದೆ’ ಎಂಬ ಮೂಢ ನಂಬಿಕೆಯನ್ನು ಹೊಂಡಿದ್ದಳು. ಹೀಗಾಗಿ ದೆವ್ವ ಬಿಡಿಸುವ ನಿಟ್ಟಿನಲ್ಲಿ ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ ದೆವ್ವ ಬಿಡಿಸುವ ಪ್ರಹಸನದ ವೇಳೆ ಗೀತಾಳಿಗೆ ನಿರಂತರವಾಗಿ ಕೋಲಿನಿಂದ ಹೊಡೆಯಲಾಗಿದೆ. ಗೀತಾ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮಹಿಳೆಯ ಸಾವಿನ ನಂತರ ಗ್ರಾಮದಲ್ಲಿ ಪಂಚಾಯತಿ ನಡೆದಿದ್ದು, ಇದು ವಿಫಲವಾದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ. ಗೀತಾಳ ಮೃತದೇಹವನ್ನು ಹೊಳೆಹೊನ್ನೂರು ಸಮುದಾಯ ಭವನದಲ್ಲಿ ಇಡಲಾಗಿದ್ದು, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…