ಹೃದಯಾಘಾತದಿಂದ 34 ವರ್ಷದ ಯುವಕ ಸಾವು
ಹೃದಯಾಘಾತದಿಂದ 34 ವರ್ಷದ ಯುವಕ ಸಾವು
ಕಂದಮ್ಮನಿಗಾಗಿ ಬಾಳುವ ಆಸೆ ಇತ್ತು… ಆದರೆ ಹೃದಯ ದ್ರೋಹ ಬಗೆದು ಬಡಿತ ನಿಲ್ಲಿಸಿತ್ತು…
ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿ ತಂದೆ ಎಂಬ ಬಿರುದು ಪಡೆದ ಮೇಲೆ ದಿನವೂ ಕಣ್ಣಲ್ಲಿ ಕನಸು ತುಂಬಿಸಿಕೊಂಡಿದ್ದ ಗಿರೀಶ್ ಎಂಬ ಯುವಕ ಕೇವಲ 34ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ನಿವಾಸಿ ಗಿರೀಶ್ ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆನೋವು ಕಾಣಿಸಿಕೊಂಡಿತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕುಟುಂಬದವರು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರು. ಆದರೆ ದಾರಿ ಮಧ್ಯೆ ಗಿರೀಶ್ ಕೊನೆಯುಸಿರೆಳೆದರು.
ಇಡೀ ಕುಟುಂಬಕ್ಕಾಗಿ ಇದು ನಂಬಲಾರದ ಶಾಕ್. ಎರಡು ವರ್ಷಗಳ ಹಿಂದಷ್ಟೇ ವಿವಾಹವಾದ ಗಿರೀಶ್ ತಂದೆಯಾಗಿದ್ದ ಖುಷಿಯಲ್ಲಿದ್ದ ಸಂಧರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬದ ಮೇಲೆ ಆಘಾತದ ಮೋಡ ಕವಿದಂತಾಗಿದೆ.
ಯುವ ವಯಸ್ಸಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗಿರೀಶ್ ಅವರ ಮರಣ ಮತ್ತೊಂದು ಎಚ್ಚರಿಕೆಯ ಗಂಟೆಯಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…