50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ
50 lakh threat – house and shop broken into, property destroyed
ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ 50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6 ಯುವಕರು ಬಂದು ಅವರ ಅಣ್ಣನೊಂದಿಗೆ ಮಾತನಾಡಲು ಫೋನ್ ನೀಡಿದ್ದಾರೆ. ಫೋನ್ ತೆಗೆದುಕೊಂಡು ಮಾತನಾಡಿದಾಗ, ಆ ವ್ಯಕ್ತಿ ನನಗೆ ನೀನು 50 ಲಕ್ಷ ಹಣ ನೀಡಬೇಕು. ಇಲ್ಲವಾದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹಣ ನೀಡಲು ನಿರಾಕರಿಸಿದ ನಂತರ, ಅದೇ ರಾತ್ರಿ ಯುವಕರು ಮತ್ತೆ ಮನೆಗೆ ಬಂದು ಜಗಳ ಮಾಡಿ, ದೂರುದಾರರ ಅಳಿಯನಿಗೂ ಬೆದರಿಕೆ ಹಾಕಿದ್ದಾರೆ. ಇದರಿಂದ ಹೆದರಿದ ದೂರುದಾರರು ತಮ್ಮ ಸಂಬಂಧಿಕರ ಮನೆಗೆ ಹೋಗಿ ಉಳಿದುಕೊಂಡಿದ್ದಾರೆ. ಮರುದಿನ ನೆರೆಮನೆಯವರು ಕರೆ ಮಾಡಿ, ಅವರ ಮನೆಯ ವಸ್ತುಗಳನ್ನು ಹಾಳು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಮನೆಗೆ ಬಂದು ನೋಡಿದಾಗ 50 ಸಾವಿರ ಮೌಲ್ಯದ ವಸ್ತುಗಳನ್ನು ಹಾಳು ಮಾಡಿರುವುದು ಕಂಡುಬಂದಿದೆ.
ದೂರುದಾರರ ಅಳಿಯನ ಅಂಗಡಿಯ ಬಳಿಯೂ ಹೋಗಿ, ಹಣ ಕೊಡುವವರೆಗೂ ಅಂಗಡಿಯನ್ನು ತೆರೆಯಲು ಬಿಡುವುದಿಲ್ಲ ಎಂದು ಹೇಳಿ, ಡೆಸ್ಕ್ಟಾಪ್ ಸೇರಿದಂತೆ ಇತರ ವಸ್ತುಗಳನ್ನು ಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
50 lakh threat – house and shop broken into, property destroyed
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…