ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ.

ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು.

ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ ಸಹಿತ ವಿವಿಧೆಡೆ ಹುಡುಕಾಟ ನಡೆಸಿದರೂ ಆಕೆಯ ಯಾವುದೇ ಸುಳಿವು ಪತ್ತೆಯಾಗಿಲ್ಲ. ಕಾರಿನಲ್ಲಿ ಮೊಬೈಲ್ ಹಾಗೂ ಇನ್ನಿತರ ವಸ್ತುಗಳು ಕಂಡುಬಂದ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಿದಾಗ ಆಕೆಯ ವಿಳಾಸ ಪತ್ತೆಯಾಯಿತು.

ಈ ಬಗ್ಗೆ ಸಂಬಂಧಪಟ್ಟವರನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ. ಈ ನಡುವೆ ದೇವಸ್ಥಾನದ ವತಿಯಿಂದ ಸೌಪರ್ಣಿಕಾ ನದಿ ಸಮೀಪ ಹಾಕಿದ್ದ ಸಿಸಿಟಿವಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆ ಈಜುತ್ತಿರುವುದು ಕಂಡು ಬಂದಿದೆ. ಉತ್ತಮ ಈಜುಗಾರ್ತಿಯಾಗಿರುವ ವಸುಧಾ ಅವರು ಬಹುದೂರ ಈಜಿ ದಡ ಸೇರಿದರೇ ಅಥವಾ ಉಕ್ಕಿ ಹರಿಯುತ್ತಿರುವ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಹೋದರೇ ಎನ್ನುವುದು ಇನ್ನೂ ಯಕ್ಷ ಪ್ರಶ್ನೆಯಾಗಿದೆ.

ಮುಳುಗುತಜ್ಞ ಈಶ್ವರ್ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ನಾಪತ್ತೆಯಾದ ಮಹಿಳೆಯ ಶೋಧ ಕಾರ್ಯ ನಡೆಸಿದರೂ ಸಂಜೆಯ ತನಕ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ.

ಕುಟುಂಬದ ಸದಸ್ಯರು ಆಗಮನ. ನಾಪತ್ತೆಯಾದ ಮಹಿಳೆಯ ಪೋಷಕರು ಹಾಗೂ ಕುಟುಂಬ ಸದಸ್ಯರು ಸುದ್ದಿ ತಿಳಿದ ತತ್‌ಕ್ಷಣ ಕೊಲ್ಲೂರಿಗೆ ಆಗಮಿಸಿದ್ದಾರೆ. ಈಕೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ವಿವಾಹಿತರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಸುಧಾ ವಿವಿಧ ತೀರ್ಥ ಕ್ಷೇತ್ರ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಒಂಟಿಯಾಗಿ ತೆರಳಿ ಧ್ಯಾನಾಸಕ್ತರಾಗುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ನಾಪತ್ತೆಯಾದ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ದೊರೆಕಿದಲ್ಲಿ ಕೊಲ್ಲೂರು ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

18 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

18 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

18 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

2 days ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

2 days ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

2 days ago