ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್ನಲ್ಲಿ ಶವವಾಗಿ ಪತ್ತೆ
ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಗೆರೆ ಅಂಚೆಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ.
ಮೃತನನ್ನು ನಾಗರಾಜ್ (34) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ನಿನ್ನೆ ವಿಸರ್ಜನೆ ನೆರವೇರಿಸಲಾಯಿತು. ಈ ವೇಳೆ ಟ್ರಂಚ್ ಬಳಿ ಕಾಲು ಜಾರಿ ಬಿದ್ದು ದುರ್ಘಟನೆ ಸಂಭವಿಸಿದ್ದೆಂಬ ಶಂಕೆ ವ್ಯಕ್ತವಾಗಿದೆ. ಮಳೆಯ ನೀರು ತುಂಬಿಕೊಂಡಿದ್ದರಿಂದ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಟ್ರಂಚ್ನ ದಂಡೆ ಹೊಡೆದು ನೀರು ಖಾಲಿ ಮಾಡಿದಾಗ ಶವ ಪತ್ತೆಯಾಯಿತು.
ಗ್ರಾಮಸ್ಥರು ಆನೆ ಟ್ರಂಚ್ಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದೇ ಈ ದುರಂತಕ್ಕೆ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…
ಹಿಟ್ ಅಂಡ್ ರನ್; ಬೈಕ್ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…