Breaking
13 Jan 2026, Tue

ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಗೆರೆ ಅಂಚೆಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ.

ಮೃತನನ್ನು ನಾಗರಾಜ್ (34) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ನಿನ್ನೆ ವಿಸರ್ಜನೆ ನೆರವೇರಿಸಲಾಯಿತು. ಈ ವೇಳೆ ಟ್ರಂಚ್‌ ಬಳಿ ಕಾಲು ಜಾರಿ ಬಿದ್ದು ದುರ್ಘಟನೆ ಸಂಭವಿಸಿದ್ದೆಂಬ ಶಂಕೆ ವ್ಯಕ್ತವಾಗಿದೆ. ಮಳೆಯ ನೀರು ತುಂಬಿಕೊಂಡಿದ್ದರಿಂದ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಟ್ರಂಚ್‌ನ ದಂಡೆ ಹೊಡೆದು ನೀರು ಖಾಲಿ ಮಾಡಿದಾಗ ಶವ ಪತ್ತೆಯಾಯಿತು.

ಗ್ರಾಮಸ್ಥರು ಆನೆ ಟ್ರಂಚ್‌ಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದೇ ಈ ದುರಂತಕ್ಕೆ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್