ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ
ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ.
ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ.
ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮುಖ್ಯಶಿಕ್ಷಕರ ಕೊಠಡಿಯಲ್ಲಿ ತಾತ್ಕಾಲಿಕವಾಗಿ ಪಾಠಕ್ಕೆ ಹಾಜರಾಗುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಓದಲು ಸೂಕ್ತ ಪರಿಸರವೇ ಇಲ್ಲದಂತಾಗಿದೆ. ಪೋಷಕರು ಮತ್ತು ಗ್ರಾಮಸ್ಥರು ಈ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿ, ತುರ್ತು ಆಧಾರದ ಮೇಲೆ ಮಕ್ಕಳಿಗೆ ಸುರಕ್ಷಿತ ತರಗತಿ ಕೊಠಡಿ ಕಲ್ಪಿಸುವಂತೆ ಅಧಿಕಾರಿಗಳಲ್ಲಿ ಒತ್ತಾಯಿಸಿದ್ದಾರೆ.
ಘಟನೆ ನಂತರ ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಗೆ ಶೀಘ್ರದಲ್ಲೇ ಮರುಕಟ್ಟಡ ನಿರ್ಮಾಣ ಮಾಡಬೇಕೆಂದು ಅವರು ಭರವಸೆ ನೀಡಿದ್ದಾರೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…