RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು

ರಿಪ್ಪನ್ ಪೇಟೆ : ರಕ್ಷಾ ಬಂಧನ ಹಬ್ಬದ ಅಂಗವಾಗಿ, ಬಿಜೆಪಿ ಹೊಸನಗರ ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೋಮವಾರ ವಿಶೇಷ ಕಾರ್ಯಕ್ರಮದ ಮೂಲಕ ರಾಖಿ ಕಟ್ಟುವ ಕಾರ್ಯಕ್ರಮ ನಡೆಯಿತು.

ಸಂಪ್ರದಾಯಬದ್ಧ ರೀತಿಯಲ್ಲಿ ಹಬ್ಬವನ್ನು ಆಚರಿಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ಮೊದಲಿಗೆ ಪೊಲೀಸರ ಕೈಗೆ ರಾಖಿ ಕಟ್ಟಿದರು. ನಂತರ ಅವರಿಗೆ ತಿಲಕ ಹಾಕಿ, ಮಿಠಾಯಿ ತಿನ್ನಿಸಿ ಶುಭಾಶಯಗಳನ್ನು ಹಂಚಿಕೊಂಡರು.

ಈ ಸಂದರ್ಭ ಗ್ರಾಪಂ ಮಾಜಿ ಅಧ್ಯಕ್ಷೆ ಮಂಜುಳಾ ಕೆ ರಾವ್ ಮಾತನಾಡಿ “ಪೊಲೀಸರು ದಿನರಾತ್ರಿ ನಮ್ಮ ಸುರಕ್ಷತೆಗೆ ಶ್ರಮಿಸುತ್ತಿದ್ದಾರೆ. ಸಮಾಜದ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಅವರು ನಿರಂತರ ಜಾಗರೂಕರಾಗಿದ್ದಾರೆ. ಈ ಹಬ್ಬದ ಮೂಲಕ ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶ ನಮ್ಮದು,” ಎಂದು ಹೇಳಿದರು.

ಪಿಎಸೈ ರಾಜುರೆಡ್ಡಿ ಮಾತನಾಡಿ “ನಮ್ಮ ಕರ್ತವ್ಯವನ್ನು ಗುರುತಿಸಿ ಹಬ್ಬದ ಸಂದರ್ಭ ನಮ್ಮನ್ನು ನೆನಪಿಸಿಕೊಂಡಿದ್ದಕ್ಕೆ ಸಂತೋಷ. ಇದು ನಮ್ಮಲ್ಲಿ ಮತ್ತಷ್ಟು ಹೊಣೆಗಾರಿಕೆ, ಪ್ರೇರಣೆ ಮೂಡಿಸುತ್ತದೆ,” ಎಂದು ಹೇಳಿದರು.

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸಹ ತಮ್ಮ ಅಭಿಪ್ರಾಯ ಹಂಚಿಕೊಂಡು, ಇಂತಹ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಪರಸ್ಪರ ನಂಬಿಕೆ, ಸಹಕಾರ ಮತ್ತು ಬಾಂಧವ್ಯವನ್ನು ಹೆಚ್ಚಿಸಲು ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ರಾಖಿ ಕಟ್ಟುವ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಮುಖರಾದ ಎಂ ಬಿ ಮಂಜುನಾಥ್ ,ಸುರೇಶ್ ಸಿಂಗ್ , ಮುರುಳಿ ಕೆರೆಹಳ್ಳಿ ,ರಾಮಚಂದ್ರ ಮಹಿಳಾ ಮೋರ್ಚಾ ಪ್ರಮುಖರಾದ ನಾಗರತ್ನ ದೇವರಾಜ್ , ಪದ್ಮಾ ಸುರೇಶ್ , ಅಶ್ವಿನಿ , ರೇಖಾ ರವಿ , ಲಕ್ಷ್ಮಿ ಶ್ರೀನಿವಾಸ್ , ಶೈಲಾ ಪ್ರಭು ಹಾಗೂ ಇನ್ನಿತರರಿದ್ದರು.

ರಕ್ಷಾ ಬಂಧನ ಹಬ್ಬವು ಸಹೋದರ-ಸಹೋದರಿಯರ ನಡುವಿನ ಪ್ರೀತಿಯ ಸಂಕೇತವಾದರೂ, ಈ ಬಾರಿ ಮಹಿಳಾ ಮೋರ್ಚಾ ಅದನ್ನು ಹೊಸ ಅರ್ಥ ನೀಡುವಂತೆ ಆಚರಿಸಿದೆ. ಪೊಲೀಸರನ್ನೂ ಸಮಾಜದ “ರಕ್ಷಕರು” ಎಂದು ಪರಿಗಣಿಸಿ, ಅವರಿಗೆ ರಾಖಿ ಕಟ್ಟುವ ಮೂಲಕ ಈ ಹಬ್ಬವನ್ನು ಜನಸಾಮಾನ್ಯರ ಮತ್ತು ಕಾನೂನು ರಕ್ಷಕರ ನಡುವಿನ ಬಾಂಧವ್ಯದ ಹಬ್ಬವನ್ನಾಗಿ ಮಾಡಿದ್ದಾರೆ.

ವಿಚಾರಣಾಧೀನ ಖೈದಿಗೂ ರಾಖಿ ಕಟ್ಟಿದ ಮಹಿಳೆಯರು

ಹೊಸನಗರ ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಮೊದಲು ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಂಪ್ರದಾಯಬದ್ಧವಾಗಿ ರಾಖಿ ಕಟ್ಟಲಾಯಿತು. ಬಳಿಕ ಠಾಣೆಯ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿಗೂ ಮಹಿಳೆಯರು ರಾಖಿ ಕಟ್ಟಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ -…

38 minutes ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

16 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

18 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

19 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago