Breaking
12 Jan 2026, Mon

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ರಾಜುರೆಡ್ಡಿ

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ರಾಜುರೆಡ್ಡಿ

ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ರಾಜುರೆಡ್ಡಿ ಹೇಳಿದರು.

ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ , ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಿಪ್ಪನ್‌ಪೇಟೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ ಹೃದಯಾಘಾತ, ರಕ್ತದೊತ್ತಡ, ಲಿವರ್ ಸಮಸ್ಯೆ ಸೇರಿದಂತೆ ಹಲವು ಬಗೆಗೆ ರೋಗಗಳಿಂದ ಮುಕ್ತನಾಗಲು ಸಾಧ್ಯವಿದ್ದು, ಇದಕ್ಕೆ ನಿರಂತರ ರಕ್ತದಾನವೇ ತಕ್ಕ ಉತ್ತರವಾಗಿದೆ ಎಂದರು.

ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಮಾತನಾಡಿ ಯಾವುದೇ ಅಪಘಾತ, ಅನಾಹುತದಂತಹ ತುರ್ತು ಸಂದರ್ಭದಲ್ಲಿ ವ್ಯಕ್ತಿಯ ಜೀವ ಉಳಿಸಲು ರಕ್ತದ ಅಗತ್ಯತೆ ಅನಿವಾರ್ಯವಾಗಿದೆ. ಓರ್ವ ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಕನಿಷ್ಟ ಎರಡು ಬಾರಿ ರಕ್ತದಾನ ಮಾಡಬಹುದು. ಇದರಿಂದ ಜೀವ ಉಳಿಸಿದ ಸಾರ್ಥಕ ಭಾವ ಹೊಂದಬಹುದು. ಯುವಸಮೂಹ ರಕ್ತದಾನ ಕುರಿತು ಯಾವ ಹಿಂಜರಿಕೆ ಹೊಂದದೆ ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

47 ಬಾರಿ ರಕ್ತದಾನ ಮಾಡಿರುವ, ಪರಿಸರಾಸಕ್ತ ಹೆಡ್ ಕಾನ್‌ಸ್ಟೇಬಲ್ ಹಾಲೇಶಪ್ಪ ಮಾತನಾಡಿ, ಪೊಲೀಸರ ಆರೋಗ್ಯ ಸುಸ್ಥಿತಿ ಕಾಯ್ದುಕೊಳ್ಳುವ ಮೂಲಕ ಸಮಾಜದ ಅಗತ್ಯತೆಯನ್ನು ಪೂರೈಸುವುದು ಈ ಶಿಬಿರದ ಮೂಲ ಉದ್ದೇಶವಾಗಿದ್ದು, ಇಲಾಖೆಯ ಮೇಲಾಧಿಕಾರಿಗಳ ಸಂಪೂರ್ಣ ಬೆಂಬಲ ಈ ಕಾರ್ಯಕ್ರಮಕ್ಕಿದೆ ಎಂದರು.

ಈ ಸಂಧರ್ಭದಲ್ಲಿ ಪ್ರಮುಖರಾದ ಆನಂದ್ ಮೆಣಸೆ , ಉಬೇದುಲ್ಲಾ ಷರೀಪ್ , ರಾಘವೇಂದ್ರ , ಶೀಲಾ ಆರ್ ಡಿ , ಮಹಮ್ಮದ್ ಹುಸೇನ್ , ಶ್ರೀಧರ್ ಚಿಗುರು , ಪ್ರಶಾಂತ್ ತಳಲೆ , ಲೇಖನಾ , ಶ್ವೇತಾ ಆಚಾರ್ಯ , ಸಾಜೀದಾ , ಧನಲಕ್ಷ್ಮಿ ಹಾಗೂ ಇನ್ನಿತರರಿದ್ದರು.

ಒಟ್ಟಾರೆ 47 ಯೂನಿಟ್ ರಕ್ತ ಸಂಗ್ರಹವಾಯಿತು. ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ ಸಿಪಿಐ ಗುರಣ್ಣ ಹೆಬ್ಬಾಳ್ ಅವರ ಮಾರ್ಗದರ್ಶನ, ಪಿಎಸ್‌ಐ ರಾಜುರೆಡ್ಡಿ ನೇತೃತ್ವ ಹಾಗೂ ಹೆಡ್‌ ಕಾನ್ಸ್ ಟೇಬಲ್ ಹಾಲೇಶಪ್ಪ ಅವರ ಮುಂದಾಳತ್ವದಲ್ಲಿ ಈ ರಕ್ತದಾನ ಶಿಬಿರವು ಯಶಸ್ವಿಯಾಗಿ ಸಂಪೂರ್ಣಗೊಂಡಿತು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್