ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು.

ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ ಬೇಡ. ಪರಸ್ಪರದ ಹಬ್ಬದಲ್ಲಿ ಪಾಲ್ಗೊಂಡು ಭಾವೈಕ್ಯತೆಯನ್ನು ಬೆಳೆಸಬೇಕು. ಅದುವೇ ನಿಜವಾದ ಸಂಭ್ರಮ” ಎಂದು ಹೇಳಿದರು.

ರಿಪ್ಪನ್ ಪೇಟೆಯಲ್ಲಿ ಎಲ್ಲರೂ ಅನ್ಯೋನ್ಯ ರೀತಿಯಲ್ಲಿ ತಮ್ಮ ತಮ್ಮ ಹಬ್ಬಗಳನ್ನು ಆಚರಿಸಿಕೊಳ್ಳುತ್ತಿರುವುದು ಎಲರಿಗೂ ಮಾದರಿಯಾಗಿದೆ.ನಮ್ಮ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ ಅವರು ಎಂತಹ ಸಂಧರ್ಭಗಳಲ್ಲಿಯೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು.

ಗಣಪತಿ ಪೆಂಡಾಲ್ ಹತ್ತಿರ ಮತ್ತು ವಿಸರ್ಜನೆ ಮೆರವಣಿಗೆಯ ಸಮಯದಲ್ಲಿ ಎಚ್ಚರಿಕೆ ವಹಿಸಲು ಹೇಳಿದರು. ಯಾವುದೇ ಅಶಾಂತಿ ಕಂಡುಬಂದರೆ ತಕ್ಷಣವೇ ಪೊಲೀಸರ ಗಮನಕ್ಕೆ ತರುವಂತೆ ಸೂಚಿಸಿದರು. ಜೊತೆಗೆ ಅನುಭವ ಹೊಂದಿರುವ ಸದಸ್ಯರು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮುಖಂಡರಾದ ಆರ್.ಎ. ಚಾಬುಸಾಬ್, ಎಂ.ಬಿ. ಮಂಜುನಾಥ,ಸುರೇಶ್ ಸಿಂಗ್ , ಆರ್ ರಾಘವೇಂದ್ರ ,ಆಸೀಫ಼್ ಭಾಷಾ ,ನಿರೂಪ್ ಕುಮಾರ್ ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ್ಬ, ಭಾಗವಹಿಸಿ ಮಾತನಾಡಿದರು.

ಸಭೆಯಲ್ಲಿ ಹಿಂದೂ ಮಹಾಸಭಾ ಅಧ್ಯಕ್ಷ ಸುಧೀರ್ ಪಿ , ಈದ್ ಮಿಲಾದ್ ಸಮಿತಿ ಅಧ್ಯಕ್ಷ ಅಫ಼್ಜಲ್ ಬ್ಯಾರಿ , ಟಿ ಆರ್ ಕೃಷ್ಣಪ್ಪ ,ರವೀಂದ್ರ ಕೆರೆಹಳ್ಳಿ ಹಾಗೂ ಇನ್ನಿತರರು ಇದ್ದರು‌

ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ ಕಲಗುಜ್ಜಿ, ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್, ಪಿಎಸ್‌ಐ ರಾಜುರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.

ಹಿಂದೂ ಮಹಾಸಭಾ ವತಿಯಿಂದ ಜಿಲ್ಲಾ ರಕ್ಷಾಣಾಧಿಕಾರಿಗಳಿಗೆ ಸನ್ಮಾನ

ಶಾಂತಿ ಸಭೆಯ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಗೆ ಆಗಮಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ರವರು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಆಯೋಜಿಸಿರುವ 58ನೇ ವರ್ಷದ ಗಣೇಶೋತ್ಸವದ ಪೊರ್ವ ತಯಾರಿಯನ್ನು ವೀಕ್ಷಿಸಲು ಭೂಫಾಳಂ ಚಂದ್ರಶೇಖರಯ್ಯ ಸಭಾಂಗಣಕ್ಕೆ ಆಗಮಿಸಿದರು.

ಈ ಸಂಧರ್ಭದಲ್ಲಿ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

1 hour ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

14 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

16 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

19 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

19 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

19 hours ago