ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು
ಸಾಗರ, ಆ.5 – ದಾವಣಗೆರೆ ಮೂಲದ 29 ವರ್ಷದ ಯುವಕನೊಬ್ಬನು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಾಲಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರರ ಪುತ್ರ ಕೆ. ಆಕರ್ಷ್ (29) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಆಕರ್ಷ್ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದಾಗ ಸಾಗರ ತಾಲ್ಲೂಕಿನ ಬಲಸಗೋಡು ಗ್ರಾಮದ ಸಮೀಪ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ತೀವ್ರ ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆಗೂ ಮುನ್ನವೇ ಅವರು ಪ್ರಾಣ ಬಿಟ್ಟಿದ್ದಾರೆ.
ಆಕರ್ಷ್ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ ರವರ ಆಪ್ತ ಸಹಾಯಕ ಹರೀಶ್ ಬಸಾಪುರರ ಸಹೋದರನ ಪುತ್ರರಾಗಿದ್ದರು.
ಮೃತದೇಹವನ್ನು ಸಾಗರ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.ಈ ದುರ್ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…